23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

ಕೊಕ್ಕಡ: ಹಾಲಾಡಿಯಲ್ಲಿ ಜರುಗಿದ ವಲಯ ಮಟ್ಟದ ಸಮ್ಮೇಳನದಲ್ಲಿ ಕೊಕ್ಕಡ ಕಪಿಲಾ ಘಟಕದ ಹಿರಿಯ ಸದಸ್ಯರಾದ ಜೆಸಿಂತಾ ಡಿ ಸೋಜ ಅವರಿಗೆ ಪಂಚರತ್ನ ಪುರಸ್ಕಾರ ಅನ್ವಯ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೆಸಿಐ ಶಂಕರನಾರಾಯಣ ಘಟಕದ ಆತಿಥ್ಯದಲ್ಲಿ ಜು. 23 ರಂದು ಶ್ರೀಮತಿ ಶಾಲಿನಿ ಜಿ. ಶಂಕರ ಕನ್ವೆನ್ಷನ್ ಸೆಂಟರ್, ಇದರಲ್ಲಿ ವಲಯ 15 ಇದರ ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳನ ಜರುಗಿತು.ಕೊಕ್ಕಡ ಘಟಕ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರಿಗೆ ಈ ವರ್ಷ ಮಾಡಿದ ಸಾಧನೆಗೆ ಶೈನಿಂಗ್ ಪವರ್ ಸ್ಟಾರ್ ಅಧ್ಯಕ್ಷರು ಹಾಗೂ ಟಾಪ್ 8 ಘಟಕ ಎಂಬ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಲಯಾಧ್ಯಕ್ಷ ಶ್ರೀ ಪುರುಷೋತ್ತಮ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ವ್ಯವಹಾರ ವಿಭಾಗದ ನಿರ್ದೇಶಕರಾದ ನಾಗರಾಜ್ ಪೂಜಾರಿ, ವಲಯ ಆಡಳಿತ ಮಂಡಳಿಯ ಮರಿಯಪ್ಪ, ಉಷಾ ಕಲ್ಮಾಡಿ, ವಲಯ ಉಪಾಧ್ಯಕ್ಷರು, ಕೊಕ್ಕಡ ಕಪಿಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya
error: Content is protected !!