25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಅಳದಂಗಡಿ : ಭಜನಾ ಪರಿಷತ್ ಬೆಳ್ತಂಗಡಿ ಇದರ ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿಯಲ್ಲಿ ನಡೆಸಲಾಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯನ್ ಕೊಯ್ಯೂರು ಭಾಗವಹಿಸಿ ಭಜನಾ ಮಂಡಳಿ ನೋಂದಾವಣಿ ಬಗ್ಗೆ ಹಾಗೂ ನವೀಕರಣ ಜಾಗದ ರೆಕಾರ್ಡ್ ಹಾಗೂ ಭದ್ರತೆಗಳ ಬಗ್ಗೆ ಭಜನಾ ಮಂಡಳಿಯ ಸಂಘಟನೆಯನ್ನು ಮಾಡುವ ಕುರಿತು ಮಂಡಳಿಯಲ್ಲಿ ಕೈಗೊಳ್ಳುವ ಕಾರ್ಯಕ್ರಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಮಂಡಳಿಯಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡುತ್ತಾ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಕೈಜೋಡಿಸಿ ನಾವು ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಇತರರಿಗೆ ಮಾದರಿಯಾಗುವಂತೆ ಪ್ರಯತ್ನಿಸೋಣ ಎಂದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಪರಿಷತ್ತಿನ ವಲಯ ಸಂಯೋಜಕರಾದ ಸೋಮನಾಥ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಭಜನಾ ಮಂಡಳಿಯ ಎಲ್ಲಾ ಅಧ್ಯಕ್ಷ ಕಾರ್ಯದರ್ಶಿಯವರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲ ರವರು ಸ್ವಾಗತಿಸಿ, ಸೇವಾ ಪ್ರತಿನಿಧಿ ಹೇಮಲತಾ ವಂದಿಸಿದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya
error: Content is protected !!