23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ: ತಾಲೂಕಿನ ಆರಂಬೋಡಿ ಗ್ರಾಮದ ಗಾಂದೊಟ್ಯ ನಿವಾಸಿಯಾದ ಸುಜಾತಾ ಪೂಜಾರಿ ಅವರಿಗೆ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಸಕ್ರಿಯ ಸದಸ್ಯ ಕಿರಣ್ ಕುಮಾರ್ ಮಂಜಿಲ ಇವರು ಶೌಚಾಲಯ ಹಾಗೂ ಸ್ನಾನದ ಕೊಠಡಿ ನಿರ್ಮಿಸಿ ಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕಿರಣ್ ಮಂಜಿಲರವರು ಸುಮಾರು ರೂ 70ಸಾವಿರ ಖರ್ಚು ಮಾಡಿ ನಿರ್ಮಿಸಿದ ಶೌಚಾಲಯ ಹಾಗೂ ಸ್ಥಾನದ ಕೊಠಡಿಯನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಕಿರಣ್ ಮಂಜಿಲರವರು ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, ಸಮಾಜ ಸೇವೆಯಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡಿರುತ್ತಾರೆ. ಇವರ ಹುಟ್ಟುವಹಬ್ಬದ ದಿನದಂದು ಶೌಚಾಲಯವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಅಧ್ಯಕ್ಷರಾದ ರಾಮಚಂದ್ರ ಶೆಟ್ಟಿಗಾರ್, ಕಾರ್ಯದರ್ಶಿಯಾದ ಐವನ್ ಮೇನೆಜಸ್, ಸಹಾಯಕ ಗವರ್ನರ್ ರಾಘವೇಂದ್ರ ಭಟ್, ಪದಾಧಿಕಾರಿಗಳಾದ ಹರಿಪ್ರಸಾದ್ ಶೆಟ್ಟಿ, ಶರಾಲ್ಡ್ ಕ್ರಾಸ್ತಾ., ರೋಡಲ್ಫ್ ಮಾಸ್ಟರ್,ವೇಣೂರು ಗ್ರಾ. ಪಂ. ಮಾಜಿ ಸದಸ್ಯರಾದ ರಾಜೇಶ್ ಮೂಡುಕೋಡಿ, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ ಅಜ್ಜಾಡಿ, ಭಾರತೀಯ ಜನತಾ ಪಕ್ಷದ ಬೂತ್ ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಉಮನೊಟ್ಟು ಹಾಗೂ ಪದಾಧಿಕಾರಿಗಳಾದ ಗಣೇಶ್ ಶೆಟ್ಟಿಗಾರ್, ರಾಧಾಕೃಷ್ಣ ಶೆಟ್ಟಿ ಉಗ್ರೋಡಿ, ಆಶಾ ಎಸ್ ಶೆಟ್ಟಿ, ಉಮೇಶ್ ಶೆಟ್ಟಿ ಪಾಳ್ಯ, ಸಂತೋಷ್ ಮಂಜಿಲ, ರಾಜೇಶ್ ಹುಲಿಮೇರು, ಸುರೇಶ್ ಮಂಜಿಲ, ನಿತೇಶ್ ಕುಂಜಾಡಿ, ಸುರೇಶ್. ಎಚ್.ಉಪಸ್ಥಿತರಿದ್ದರು.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!