22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಅಳದಂಗಡಿ : ಭಜನಾ ಪರಿಷತ್ ಬೆಳ್ತಂಗಡಿ ಇದರ ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿಯಲ್ಲಿ ನಡೆಸಲಾಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯನ್ ಕೊಯ್ಯೂರು ಭಾಗವಹಿಸಿ ಭಜನಾ ಮಂಡಳಿ ನೋಂದಾವಣಿ ಬಗ್ಗೆ ಹಾಗೂ ನವೀಕರಣ ಜಾಗದ ರೆಕಾರ್ಡ್ ಹಾಗೂ ಭದ್ರತೆಗಳ ಬಗ್ಗೆ ಭಜನಾ ಮಂಡಳಿಯ ಸಂಘಟನೆಯನ್ನು ಮಾಡುವ ಕುರಿತು ಮಂಡಳಿಯಲ್ಲಿ ಕೈಗೊಳ್ಳುವ ಕಾರ್ಯಕ್ರಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಮಂಡಳಿಯಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡುತ್ತಾ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಕೈಜೋಡಿಸಿ ನಾವು ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಇತರರಿಗೆ ಮಾದರಿಯಾಗುವಂತೆ ಪ್ರಯತ್ನಿಸೋಣ ಎಂದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಪರಿಷತ್ತಿನ ವಲಯ ಸಂಯೋಜಕರಾದ ಸೋಮನಾಥ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಭಜನಾ ಮಂಡಳಿಯ ಎಲ್ಲಾ ಅಧ್ಯಕ್ಷ ಕಾರ್ಯದರ್ಶಿಯವರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲ ರವರು ಸ್ವಾಗತಿಸಿ, ಸೇವಾ ಪ್ರತಿನಿಧಿ ಹೇಮಲತಾ ವಂದಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya
error: Content is protected !!