September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಅಳದಂಗಡಿ : ಭಜನಾ ಪರಿಷತ್ ಬೆಳ್ತಂಗಡಿ ಇದರ ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿಯಲ್ಲಿ ನಡೆಸಲಾಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯನ್ ಕೊಯ್ಯೂರು ಭಾಗವಹಿಸಿ ಭಜನಾ ಮಂಡಳಿ ನೋಂದಾವಣಿ ಬಗ್ಗೆ ಹಾಗೂ ನವೀಕರಣ ಜಾಗದ ರೆಕಾರ್ಡ್ ಹಾಗೂ ಭದ್ರತೆಗಳ ಬಗ್ಗೆ ಭಜನಾ ಮಂಡಳಿಯ ಸಂಘಟನೆಯನ್ನು ಮಾಡುವ ಕುರಿತು ಮಂಡಳಿಯಲ್ಲಿ ಕೈಗೊಳ್ಳುವ ಕಾರ್ಯಕ್ರಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಮಂಡಳಿಯಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡುತ್ತಾ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಕೈಜೋಡಿಸಿ ನಾವು ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಇತರರಿಗೆ ಮಾದರಿಯಾಗುವಂತೆ ಪ್ರಯತ್ನಿಸೋಣ ಎಂದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಪರಿಷತ್ತಿನ ವಲಯ ಸಂಯೋಜಕರಾದ ಸೋಮನಾಥ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಭಜನಾ ಮಂಡಳಿಯ ಎಲ್ಲಾ ಅಧ್ಯಕ್ಷ ಕಾರ್ಯದರ್ಶಿಯವರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲ ರವರು ಸ್ವಾಗತಿಸಿ, ಸೇವಾ ಪ್ರತಿನಿಧಿ ಹೇಮಲತಾ ವಂದಿಸಿದರು.

Related posts

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya
error: Content is protected !!