30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಆಗಮಿಸಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಮತ್ತು ಪುತ್ತೂರಿನ ಶಾಸಕರಾದ ಅಶೋಕ್ ರೈ ಯವರನ್ನು ಅಭಿನಂದಿಸಲಾಯಿತು.

 ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಧು ಬಂಗಾರಪ್ಪ ನವರು  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಶಿಲಾನ್ಯಾಸ ಸಂಧರ್ಭದಲ್ಲಿ ಬಂದಿದ್ದೆ ಬ್ರಹ್ಮಕಲಶ ಸಂದರ್ಭದಲ್ಲಿ ಬರಲಾಗಲಿಲ್ಲ ನನಗೆ ಶ್ರೀ ಕ್ಷೇತ್ರಕ್ಕೆ ಬರಬೇಕೆಂಬ ಬಹುದಿನಗಳ ಆಸೆ ಇತ್ತು ಮಂತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಪ್ರಥಮ ದಿನವೇ ಕ್ಷೇತ್ರಕ್ಕೆ ತೆರಳ ಬೇಕೆಂಬ ಪ್ರೇರಣೆ ನನ್ನಲಿ ಮಹಾ ಮಾತೆ ದೇಯಿ ಬೈದೆತಿ ಉಂಟುಮಾಡುವ  ಮೂಲಕ ಕ್ಷೇತ್ರಕ್ಕೆ ಭೇಟಿ ಕೊಡುವ ಭಾಗ್ಯ ನನಗೆ ಒದಗಿ ಬಂತು ಇದು ಇಲ್ಲಿಯ ಮಹಾನ್ ಶಕ್ತಿಯ ಕೃಪೆ ಎಂದು ಭಾವುಕರಾದರು. ಶ್ರೀ ಕ್ಷೇತ್ರಕ್ಕೆ ಸರ್ಕಾರದಿಂದ ಸಮುದಾಯ ಭವನ ಮತ್ತು ಪ್ರವಾಸೋದ್ಯಮದ ಪ್ರಯೋಜನಗಳನ್ನು ಒದಗಿಸಿಕೊಡುವ ಬಗ್ಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

ಸ್ಥಳೀಯ  ಶಾಸಕರಾದ ಅಶೋಕ್ ರೈ ಯವರು ಕ್ಷೇತ್ರದ ಅಭಿವೃದ್ಧಿಗೆ ಅವಶ್ಯಕವಾದ ಮೂಲಭೂತ ಅವಶ್ಯಕತೆಗಳನ್ನು ಸರ್ಕಾರದ ಮೂಲಕ ಒದಗಿಸಿ ಕೊಡುವುದಾಗಿ ತಿಳಿಸಿದರು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
 ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ ಉಪಾಧ್ಯಕ್ಷ ರಾದ ರವಿಪೂಜಾರಿ ಚಿಲಿಂಬಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರಾದ ಜಯಂತ ನಡುಬೈಲ್, ಅನುವಂಶಿಕ ಮುಕ್ತೇಸರ ಶ್ರೀಧರ ಪೂಜಾರಿ, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಕಾವು ಹೇಮನಾಥ ಶೆಟ್ಟಿ, ಅನಿತಾ ಶೆಟ್ಟಿ, ಡಾ.ರಾಜಾರಾಮ್, ಅಕ್ಷಿತ್ ಸುವರ್ಣ, ಇಫ್ತಿಕಾರ್, ಸತೀಶ್ ಕೆಡಿಂಜೆ ನವನೀತ್ ಹಿಂಗಾಣಿ, ಶೇಖರ್ ಬಂಗೇರ, ರಾಜೇಂದ್ರ ಚಿಲಿಂಬಿ, ನಾರಾಯಣ ಮಚ್ಚಿನ, ಪ್ರಕಾಶ್ ಪೂಜಾರಿ ನಾರವಿ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya
error: Content is protected !!