25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಆಗಮಿಸಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಮತ್ತು ಪುತ್ತೂರಿನ ಶಾಸಕರಾದ ಅಶೋಕ್ ರೈ ಯವರನ್ನು ಅಭಿನಂದಿಸಲಾಯಿತು.

 ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಧು ಬಂಗಾರಪ್ಪ ನವರು  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಶಿಲಾನ್ಯಾಸ ಸಂಧರ್ಭದಲ್ಲಿ ಬಂದಿದ್ದೆ ಬ್ರಹ್ಮಕಲಶ ಸಂದರ್ಭದಲ್ಲಿ ಬರಲಾಗಲಿಲ್ಲ ನನಗೆ ಶ್ರೀ ಕ್ಷೇತ್ರಕ್ಕೆ ಬರಬೇಕೆಂಬ ಬಹುದಿನಗಳ ಆಸೆ ಇತ್ತು ಮಂತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಪ್ರಥಮ ದಿನವೇ ಕ್ಷೇತ್ರಕ್ಕೆ ತೆರಳ ಬೇಕೆಂಬ ಪ್ರೇರಣೆ ನನ್ನಲಿ ಮಹಾ ಮಾತೆ ದೇಯಿ ಬೈದೆತಿ ಉಂಟುಮಾಡುವ  ಮೂಲಕ ಕ್ಷೇತ್ರಕ್ಕೆ ಭೇಟಿ ಕೊಡುವ ಭಾಗ್ಯ ನನಗೆ ಒದಗಿ ಬಂತು ಇದು ಇಲ್ಲಿಯ ಮಹಾನ್ ಶಕ್ತಿಯ ಕೃಪೆ ಎಂದು ಭಾವುಕರಾದರು. ಶ್ರೀ ಕ್ಷೇತ್ರಕ್ಕೆ ಸರ್ಕಾರದಿಂದ ಸಮುದಾಯ ಭವನ ಮತ್ತು ಪ್ರವಾಸೋದ್ಯಮದ ಪ್ರಯೋಜನಗಳನ್ನು ಒದಗಿಸಿಕೊಡುವ ಬಗ್ಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

ಸ್ಥಳೀಯ  ಶಾಸಕರಾದ ಅಶೋಕ್ ರೈ ಯವರು ಕ್ಷೇತ್ರದ ಅಭಿವೃದ್ಧಿಗೆ ಅವಶ್ಯಕವಾದ ಮೂಲಭೂತ ಅವಶ್ಯಕತೆಗಳನ್ನು ಸರ್ಕಾರದ ಮೂಲಕ ಒದಗಿಸಿ ಕೊಡುವುದಾಗಿ ತಿಳಿಸಿದರು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
 ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ ಉಪಾಧ್ಯಕ್ಷ ರಾದ ರವಿಪೂಜಾರಿ ಚಿಲಿಂಬಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರಾದ ಜಯಂತ ನಡುಬೈಲ್, ಅನುವಂಶಿಕ ಮುಕ್ತೇಸರ ಶ್ರೀಧರ ಪೂಜಾರಿ, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಕಾವು ಹೇಮನಾಥ ಶೆಟ್ಟಿ, ಅನಿತಾ ಶೆಟ್ಟಿ, ಡಾ.ರಾಜಾರಾಮ್, ಅಕ್ಷಿತ್ ಸುವರ್ಣ, ಇಫ್ತಿಕಾರ್, ಸತೀಶ್ ಕೆಡಿಂಜೆ ನವನೀತ್ ಹಿಂಗಾಣಿ, ಶೇಖರ್ ಬಂಗೇರ, ರಾಜೇಂದ್ರ ಚಿಲಿಂಬಿ, ನಾರಾಯಣ ಮಚ್ಚಿನ, ಪ್ರಕಾಶ್ ಪೂಜಾರಿ ನಾರವಿ ಮುಂತಾದವರು ಉಪಸ್ಥಿತರಿದ್ದರು.

Related posts

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya
error: Content is protected !!