September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ: ತಾಲೂಕಿನ ಆರಂಬೋಡಿ ಗ್ರಾಮದ ಗಾಂದೊಟ್ಯ ನಿವಾಸಿಯಾದ ಸುಜಾತಾ ಪೂಜಾರಿ ಅವರಿಗೆ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಸಕ್ರಿಯ ಸದಸ್ಯ ಕಿರಣ್ ಕುಮಾರ್ ಮಂಜಿಲ ಇವರು ಶೌಚಾಲಯ ಹಾಗೂ ಸ್ನಾನದ ಕೊಠಡಿ ನಿರ್ಮಿಸಿ ಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕಿರಣ್ ಮಂಜಿಲರವರು ಸುಮಾರು ರೂ 70ಸಾವಿರ ಖರ್ಚು ಮಾಡಿ ನಿರ್ಮಿಸಿದ ಶೌಚಾಲಯ ಹಾಗೂ ಸ್ಥಾನದ ಕೊಠಡಿಯನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಕಿರಣ್ ಮಂಜಿಲರವರು ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, ಸಮಾಜ ಸೇವೆಯಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡಿರುತ್ತಾರೆ. ಇವರ ಹುಟ್ಟುವಹಬ್ಬದ ದಿನದಂದು ಶೌಚಾಲಯವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಅಧ್ಯಕ್ಷರಾದ ರಾಮಚಂದ್ರ ಶೆಟ್ಟಿಗಾರ್, ಕಾರ್ಯದರ್ಶಿಯಾದ ಐವನ್ ಮೇನೆಜಸ್, ಸಹಾಯಕ ಗವರ್ನರ್ ರಾಘವೇಂದ್ರ ಭಟ್, ಪದಾಧಿಕಾರಿಗಳಾದ ಹರಿಪ್ರಸಾದ್ ಶೆಟ್ಟಿ, ಶರಾಲ್ಡ್ ಕ್ರಾಸ್ತಾ., ರೋಡಲ್ಫ್ ಮಾಸ್ಟರ್,ವೇಣೂರು ಗ್ರಾ. ಪಂ. ಮಾಜಿ ಸದಸ್ಯರಾದ ರಾಜೇಶ್ ಮೂಡುಕೋಡಿ, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ ಅಜ್ಜಾಡಿ, ಭಾರತೀಯ ಜನತಾ ಪಕ್ಷದ ಬೂತ್ ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಉಮನೊಟ್ಟು ಹಾಗೂ ಪದಾಧಿಕಾರಿಗಳಾದ ಗಣೇಶ್ ಶೆಟ್ಟಿಗಾರ್, ರಾಧಾಕೃಷ್ಣ ಶೆಟ್ಟಿ ಉಗ್ರೋಡಿ, ಆಶಾ ಎಸ್ ಶೆಟ್ಟಿ, ಉಮೇಶ್ ಶೆಟ್ಟಿ ಪಾಳ್ಯ, ಸಂತೋಷ್ ಮಂಜಿಲ, ರಾಜೇಶ್ ಹುಲಿಮೇರು, ಸುರೇಶ್ ಮಂಜಿಲ, ನಿತೇಶ್ ಕುಂಜಾಡಿ, ಸುರೇಶ್. ಎಚ್.ಉಪಸ್ಥಿತರಿದ್ದರು.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya
error: Content is protected !!