April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬಿ ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ )ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ದ.ಕ ಜಿಲ್ಲೆ.ಹಾಗೂ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ವತಿಯಿಂದ, ಸ.ಪ್ರೌಢ ಶಾಲೆ ಪೆರ್ಲ-ಬೈಪಾಡಿಯಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು,

ಕಾರ್ಯಕ್ರಮದ ಉದ್ಘಾಟನೆ ಮಾಡಿದ ಬೆಳ್ತಂಗಡಿ ತಾಲೂಕು ಜನಜಗೃತಿ ವೇದಿಕೆ ಅಧ್ಯಕ್ಷರಾದ ಕಾಸಿಂ ಮಲ್ಲಿಗೆಮನೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಗೃತಿ ವೇದಿಕೆಯ ಶಿಬಿರಾಧಿಕಾರಿ ರಾಜೇಶ್ ರವರು,ಒಬ್ಬ ವಿದ್ಯಾರ್ಥಿಯ ಬದುಕಿನಲ್ಲಿ ದುಶ್ಚಟ ಅಂಟಿಕೊಂಡಾಗ ಇಡೀ ಬದುಕೇ ನಾಶವಾಗುತ್ತದೆ, ಜೀವನದಲ್ಲಿ ದುಶ್ಚಟ ದುರಭ್ಯಾಸಗಳಿಗೆ ಬಲಿಯಾಗದೆ, ಶಿಕ್ಷಣದ ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿ,ತಂದೆ ತಾಯಿಗಳಿಗೆ ಉತ್ತಮ ಮಗನಾಗಿ ಜೀವನವನ್ನು ರೂಪಿಸಿಕೊಳ್ಳಬೇಕು, ಸಮಾಜದಲ್ಲಿ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶಾಲೆಯ ಹಿರಿಯ ಶಿಕ್ಷಕರಾದ ಕೊರಗಪ್ಪ ಮಾತನಾಡುತ್ತಾ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೀಡಿದ ಈ ಕಾರ್ಯಕ್ರಮವು ಮಕ್ಕಳಿಗೆ ತುಂಬಾ ಪ್ರಯೋಜನ ಆಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಬೆಳಾಲು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ರವರು ಶುಭ ಹಾರೈಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕರರಾದ ಮಹೇಶ್ ನಡೆಸಿ ಶಾಲಾ ಶಿಕ್ಷಕರಾದ ವಿಜಯ ಕುಮಾರ್ ರವರು ಸ್ವಾಗತಿಸಿ.

ಉಜಿರೆ ವಲಯ ಮೇಲ್ವಿಚಾರಾದ ಶ್ರೀಮತಿ ವನಿತಾರವರು ಧನ್ಯವಾದವಿತ್ತರು.

Related posts

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!