23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಇದರ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಶ್ರೀ ರತ್ನತ್ರಯ ಸಭಾಂಗಣದಲ್ಲಿ ಜು.22 ರಂದು ನಡೆಯಿತು.

ಆಹಾರೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಭಾರತೀಯ ಜೈನ್ ಮಿಲನ್ ಗೌರವ ಸಲಹೆಗಾರರು ಶ್ರೀಮತಿ ಸೋನಿಯಾ ಯಶೋವರ್ಮ ನೆರವೇರಿಸಿದರು.

ಬೆಳ್ತಂಗಡಿ ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಡಾ. ನವೀನ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾರತೀಯ ಜೈನ್ ಮಿಲನ್ ವಲಯ-8 ರ ನಿರ್ದೇಶಕರುಗಳಾದ ಬಿ. ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್ ಜೈನ್, ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಚೇರ್ಮೆನ್ ವೀ‌ರ್ ಸುಮಂತ್ ಕುಮಾರ್ ಜೈನ್, ಧೀಮತಿ ಮಹಿಳಾ ಸಮಾಜ ಉಜಿರೆ ಅಧ್ಯಕ್ಷರು ವೀರಾಂಗನ ಡಾ. ರಜತ ಪಿ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವೀರಾಂಗನ ಸುಧಾಮಣಿ , ವೀರ್ ಸನ್ಮತಿ ಕುಮಾರ್, ವೀರ್ ಅಜಯ್ ಕುಮಾರ್, ವೀರ್ ದೀಪಕ್ ಜೈನ್ ಸಂಯೋಜಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿಗಳಾದ ನಿಖಿತ್ ಜೈನ್, ಸ್ಮಿತಾ ಪ್ರಶಾಂತ್ ಜೈನ್, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya
error: Content is protected !!