September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಇದರ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಶ್ರೀ ರತ್ನತ್ರಯ ಸಭಾಂಗಣದಲ್ಲಿ ಜು.22 ರಂದು ನಡೆಯಿತು.

ಆಹಾರೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಭಾರತೀಯ ಜೈನ್ ಮಿಲನ್ ಗೌರವ ಸಲಹೆಗಾರರು ಶ್ರೀಮತಿ ಸೋನಿಯಾ ಯಶೋವರ್ಮ ನೆರವೇರಿಸಿದರು.

ಬೆಳ್ತಂಗಡಿ ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಡಾ. ನವೀನ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾರತೀಯ ಜೈನ್ ಮಿಲನ್ ವಲಯ-8 ರ ನಿರ್ದೇಶಕರುಗಳಾದ ಬಿ. ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್ ಜೈನ್, ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಚೇರ್ಮೆನ್ ವೀ‌ರ್ ಸುಮಂತ್ ಕುಮಾರ್ ಜೈನ್, ಧೀಮತಿ ಮಹಿಳಾ ಸಮಾಜ ಉಜಿರೆ ಅಧ್ಯಕ್ಷರು ವೀರಾಂಗನ ಡಾ. ರಜತ ಪಿ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವೀರಾಂಗನ ಸುಧಾಮಣಿ , ವೀರ್ ಸನ್ಮತಿ ಕುಮಾರ್, ವೀರ್ ಅಜಯ್ ಕುಮಾರ್, ವೀರ್ ದೀಪಕ್ ಜೈನ್ ಸಂಯೋಜಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿಗಳಾದ ನಿಖಿತ್ ಜೈನ್, ಸ್ಮಿತಾ ಪ್ರಶಾಂತ್ ಜೈನ್, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya
error: Content is protected !!