31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

ಉಜಿರೆ : ಬ್ರಾಹ್ಮಣರು ತಮ್ಮ ತಮ್ಮನವನ್ನು ಉಳಿಸಿಕೊಂಡು ಆಧುನಿಕ ಸಮಾಜದ ಅವಶ್ಯಕತೆಗಳಿಗೆ ಅನುಗುಣವಾಗಿ ತಮ್ಮನ್ನು ತೆರೆದುಕೊಳ್ಳಬೇಕು. ಇಂದು ಆಧುನಿಕ ಸಮಾಜ ಒದಗಿಸುವ ಅವಕಾಶಗಳು ಸಾಕಷ್ಟಿವೆ, ಆದರೆ ಅವುಗಳನ್ನು ಸದುಪಯೋಗಿಸಿಕೊಳ್ಳುವ ಬರದಲ್ಲಿ ತಮ್ಮತನವನ್ನು ನಾವು ಕಳೆದುಕೊಳ್ಳಬಾರದು. ಸಾಧನೆ ಮಾಡಬೇಕು ಎಂಬ ಛಲದಿಂದ ಮುಂದುವರೆಯುವ ಬ್ರಾಹ್ಮಣ ಮಕ್ಕಳಿಗೆ ಪರಂಪರೆಯಿಂದ ಬಂದ ಬುದ್ಧಿವಂತಿಕೆ ವರವಾಗುತ್ತದೆ. ಆಧುನಿಕ ಕಾಲಕ್ಕೆ ಅನುಗುಣವಾಗಿ ಹೆಚ್ಚು ಆತ್ಮವಿಶ್ವಾಸದಿಂದ ಹೊಸ ಹೊಸ ತನ್ನ ಮಾಡುವಂತಹ ಹುಮ್ಮಸ್ಸು, ಸ್ಪೂರ್ತಿಯನ್ನು ಒದಗಿಸುವ ಕೆಲಸವನ್ನು ಹಿರಿಯರು ಮಾಡಬೇಕು ಎಂದು ಡಾಕ್ಟರ್ ರಾಘವೇಂದ್ರ ಹೊಳ್ಳ ಕರೆ ನೀಡಿದರು. ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಸ್ಕೂಲ್ ನ ಸ್ಥಾಪಕರಾದ ಡಾ. ರಾಘವೇಂದ್ರ ಹೊಳ್ಳ ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆಯ ಸಂದರ್ಭದಲ್ಲಿ ಹಮ್ಮಿಕೊಂಡ ದಿಕ್ಸೂಚಿ – ಶುಭ ಚಿಂತನೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಜನಾರ್ಧನ ಸ್ವಾಮಿ ದೇವಸ್ಥಾನದ ಸೇವೆಯಲ್ಲಿ ಕೂಟ ಬಂಧುಗಳ ಕೊಡುಗೆಯನ್ನು ಸ್ಮರಿಸಿ ಅಂಗಸಂಸ್ಥೆಯ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು.

ದಿಕ್ಸೂಚಿ ಶುಭ ಚಿಂತನೆ ಚಿಂತನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉತ್ತಮ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಅಧ್ಯಕ್ಷರಾದ ವಿಶ್ವನಾಥ್ ಹೊಳ್ಳ ಮಜ್ಜೇನಿಬೈಲು ವಹಿಸಿದ್ದರು. ಶ್ರೀ ರಮೇಶ್ ಮಯ್ಯ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಮತ್ತು ಕಾರ್ಯದರ್ಶಿಗಳಾದ ವಿಷ್ಣು ಪ್ರಕಾಶ್ ವಂದಿಸಿದರು.

Related posts

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya
error: Content is protected !!