ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ನಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ನ್ಯಾಯತರ್ಪು ಕಾರ್ಯಕ್ಷೇತ್ರದ, ಪ್ರಗತಿ-ಬಂಧು ಒಕ್ಕೂಟ ಹಾಗೂ “ಶೌರ್ಯ” ವಿಪತ್ತು ಘಟಕದ ಸಹಕಾರದೊಂದಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

ಈ ಸಂದರ್ಭ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಭುವನೇಶ್ವರ, ಸೇವಾ-ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ವಸಂತ ಮಜಲು, ಯೋಜನಾಧಿಕಾರಿಗಳಾದ ಸುರೇಂದ್ರ , ಮೇಲ್ವಿಚಾರಕರಾದ ಹರೀಶ್ ಗೌಡ, ಸೇವಾ ಪ್ರತಿನಿಧಿ ಶ್ರೀಮತಿ ವಿನೋದ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

Leave a Comment

error: Content is protected !!