September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯವನ್ನು ಇತ್ತೀಚೆಗೆ ಅಗಲಿದ ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಕಿರಿಯಾಡಿ, ಕೊಡಂಗೆ ನಿವಾಸಿ ನವೀನ ಗೌಡ ಇವರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರವಾಗಿ ರೂ. 20 ಸಾವಿರದ ಚೆಕ್ಕನ್ನು ಉಜಿರೆ ಶಾರದ ಮಂಟಪದಲ್ಲಿ ನಡೆದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಉಜಿರೆ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಳ್ಯದ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಇವರ ಮೂಲಕ ದಿವಂಗತ ನವೀನ್ ರವರ ಪತ್ನಿ ಶ್ರೀಮತಿ ಕವಿತಾ ರವರಿಗೆ ಹಸ್ತಾಂತರ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ದೇವಸ, ಸವಣಾಲು, ನಿಕಟ ಪೂರ್ವ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ ಬೆಳ್ತಂಗಡಿ, ಗೋಪಾಲ ಕೃಷ್ಣ (ಜಿ.ಕೆ) ಉಜಿರೆ, ಸುರೇಶ್ ಕೌಡಂಗೆ, ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ (ಲಿ.)ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ್ ಕುಮಾರ್, ಸೋಮಂತ್ತಡ್ಕ ಶಾಖೆಯ ವ್ಯವಸ್ಥಾಪಕರು ಉಮೇಶ್ ಮೈರ್ನೋಡಿ, ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ, ಉಜಿರೆ, ಕಾರ್ಯದರ್ಶಿ ಶೇಖರ ಗೌಡ ಕುಂಭಪಾಲು, ಕೋಶಾಧಿಕಾರಿ ಬಾಲಕೃಷ್ಣ ಗೌಡ ಕೊರಮೇರು, ಗೌರವಾಧ್ಯಕ್ಷ ಪ್ರಕಾಶ ಗೌಡ ಅಪ್ರಮೇಯ, ಯುವ ವೇದಿಕೆ ಅಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಭರತ್, ಗ್ರಾಮ ಸಮಿತಿ ಸದಸ್ಯರು ಹಾಗೂ ಸ್ಪಂದನಾ ಸೇವಾ ಸದಸ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya
error: Content is protected !!