22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯವನ್ನು ಇತ್ತೀಚೆಗೆ ಅಗಲಿದ ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಕಿರಿಯಾಡಿ, ಕೊಡಂಗೆ ನಿವಾಸಿ ನವೀನ ಗೌಡ ಇವರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರವಾಗಿ ರೂ. 20 ಸಾವಿರದ ಚೆಕ್ಕನ್ನು ಉಜಿರೆ ಶಾರದ ಮಂಟಪದಲ್ಲಿ ನಡೆದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಉಜಿರೆ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಳ್ಯದ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಇವರ ಮೂಲಕ ದಿವಂಗತ ನವೀನ್ ರವರ ಪತ್ನಿ ಶ್ರೀಮತಿ ಕವಿತಾ ರವರಿಗೆ ಹಸ್ತಾಂತರ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ದೇವಸ, ಸವಣಾಲು, ನಿಕಟ ಪೂರ್ವ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ ಬೆಳ್ತಂಗಡಿ, ಗೋಪಾಲ ಕೃಷ್ಣ (ಜಿ.ಕೆ) ಉಜಿರೆ, ಸುರೇಶ್ ಕೌಡಂಗೆ, ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ (ಲಿ.)ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ್ ಕುಮಾರ್, ಸೋಮಂತ್ತಡ್ಕ ಶಾಖೆಯ ವ್ಯವಸ್ಥಾಪಕರು ಉಮೇಶ್ ಮೈರ್ನೋಡಿ, ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ, ಉಜಿರೆ, ಕಾರ್ಯದರ್ಶಿ ಶೇಖರ ಗೌಡ ಕುಂಭಪಾಲು, ಕೋಶಾಧಿಕಾರಿ ಬಾಲಕೃಷ್ಣ ಗೌಡ ಕೊರಮೇರು, ಗೌರವಾಧ್ಯಕ್ಷ ಪ್ರಕಾಶ ಗೌಡ ಅಪ್ರಮೇಯ, ಯುವ ವೇದಿಕೆ ಅಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಭರತ್, ಗ್ರಾಮ ಸಮಿತಿ ಸದಸ್ಯರು ಹಾಗೂ ಸ್ಪಂದನಾ ಸೇವಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!