September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಅಳದಂಗಡಿ : ಭಜನಾ ಪರಿಷತ್ ಬೆಳ್ತಂಗಡಿ ಇದರ ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿಯಲ್ಲಿ ನಡೆಸಲಾಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯನ್ ಕೊಯ್ಯೂರು ಭಾಗವಹಿಸಿ ಭಜನಾ ಮಂಡಳಿ ನೋಂದಾವಣಿ ಬಗ್ಗೆ ಹಾಗೂ ನವೀಕರಣ ಜಾಗದ ರೆಕಾರ್ಡ್ ಹಾಗೂ ಭದ್ರತೆಗಳ ಬಗ್ಗೆ ಭಜನಾ ಮಂಡಳಿಯ ಸಂಘಟನೆಯನ್ನು ಮಾಡುವ ಕುರಿತು ಮಂಡಳಿಯಲ್ಲಿ ಕೈಗೊಳ್ಳುವ ಕಾರ್ಯಕ್ರಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಮಂಡಳಿಯಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡುತ್ತಾ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಕೈಜೋಡಿಸಿ ನಾವು ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಇತರರಿಗೆ ಮಾದರಿಯಾಗುವಂತೆ ಪ್ರಯತ್ನಿಸೋಣ ಎಂದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಪರಿಷತ್ತಿನ ವಲಯ ಸಂಯೋಜಕರಾದ ಸೋಮನಾಥ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಭಜನಾ ಮಂಡಳಿಯ ಎಲ್ಲಾ ಅಧ್ಯಕ್ಷ ಕಾರ್ಯದರ್ಶಿಯವರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲ ರವರು ಸ್ವಾಗತಿಸಿ, ಸೇವಾ ಪ್ರತಿನಿಧಿ ಹೇಮಲತಾ ವಂದಿಸಿದರು.

Related posts

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!