ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Leave a Comment

error: Content is protected !!