” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಕರ್ನಾಟಕ ಸರಕಾರದ ಮಹತ್ವಪೂರ್ಣ ಯೋಜನೆಗಳಲ್ಲೊಂದಾದ ಮನೆಯ ಯಾಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡುವ ” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆಯು ಕಳಿಯ ಗ್ರಾಮ ಪಂಚಾಯತ್ ನಲ್ಲಿ ರಜಾ ದಿನದಲ್ಲೂ ನಡೆಯಿತು.
ಸುಮಾರು 150 ಕ್ಕೂ ಮಿಕ್ಕಿ ಫಲಾನುಭವಿಗಳು ಜು.22 ರಂದು ನೋಂದಾಯಿಸಿಕೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ. ಉಪಸ್ಥಿತರಿದ್ದರು.

ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಹಾಗೂ ಡಾಟಾ ಅಪರೇಟರ್ ಶ್ರೀಮತಿ ಸುಚಿತ್ರಾ ನೋಂದಣಿ ಗಾರರಾಗಿ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಮರೀಟಾ ಪಿಂಟೋ, ಲತೀಫ್ ಪರಿಮ, ಶ್ರೀಮತಿ ಇಂದಿರಾ, ಶ್ರೀಮತಿ ಶ್ವೇತಾ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ಶ್ರೀಮತಿ ನಂದಿನಿ ರೈ ಸಹಕರಿಸಿದರು.

Leave a Comment

error: Content is protected !!