July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಳೆದ ಆಡಳಿತಾವಧಿಯ ಅಭಿವೃದ್ಧಿ ಕಾರ್ಯಗಳನ್ನು ಸ್ವಲಾತ್ ಕಮಿಟಿ ಅಧ್ಯಕ್ಷರಾದ ದಾವೂದ್ ಸಾಹೇಬ್ ಮಂಜೋಟ್ಟಿ ಇವರು ವಿವರಿಸಿದರು ಹಾಗೂ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಪ್ರದಾನ ಕಾರ್ಯದರ್ಶಿ ಪಿ.ಕೆ ಆದಂ ಮಂಜೋಟ್ಟಿ ಮಂಡಿಸಿದರು.

ಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸಿದ್ದಿಕ್ ಮಸೀದಿಬಳಿ ಆಯ್ಕೆಯಾದರು, ಗೌರವ ಅಧ್ಯಕ್ಷ‌ರಾಗಿ ಅಬ್ದುಲ್ ಕರೀಂ ಕಾರಂದೂರು, ಪ್ರಧಾನ ಕಾರ್ಯದರ್ಶಿ ‌ಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ದಾವೂದ್ ಸಾಹೇಬ್ ಮಂಜೋಟ್ಟಿ, ಉಪಾಧ್ಯಕ್ಷರಾಗಿ ಹಸನ್ ಗಿಂಡಾಡಿ ಮತ್ತು ಸಿರಾಜ್ ಮಂಜೋಟ್ಟಿ , ಕಾರ್ಯದರ್ಶಿಯಾಗಿ ಪಿ.ಕೆ.ಶಮದ್ ಕಟ್ಟೆ ಆಯ್ಕೆಯಾದರು.

ಪ್ರಸ್ತುತ ಸಾಲಿನ ಆಡಳಿತ ಸಮಿತಿಯ ಸದಸ್ಯರಾಗಿ ಪಿ.ಕೆ ಆದಂ ಮಂಜೋಟ್ಟಿ , ಶಮೀಮ್ ಮದ್ದಡ್ಕ, ಸುಲೈಮಾನ್ ಕಟ್ಟೆ, ಬಶೀರ್ ಮಸೀದಿಬಳಿ, ಇಬ್ರಾಹಿಂ ತಮುನಾಕ ಮಂಜೋಟ್ಟಿ, ನವಾಜ್ ಶರೀಫ್ ಕಟ್ಟೆ, ಸಾದಿಕ್ ಮಸೀದಿ ಬಳಿ, ಬಶೀರ್ ವೇಣೂರು, ಕಮರುದ್ದೀನ್ ಮಸೀದಿ ಬಳಿ ಮತ್ತು ಪಿ.ಕೆ ಶರೀಫ್ ಮಂಜೋಟ್ಟಿ ಆಯ್ಕೆಯಾದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya
error: Content is protected !!