September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ: ತಾಲೂಕಿನ ಆರಂಬೋಡಿ ಗ್ರಾಮದ ಗಾಂದೊಟ್ಯ ನಿವಾಸಿಯಾದ ಸುಜಾತಾ ಪೂಜಾರಿ ಅವರಿಗೆ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಸಕ್ರಿಯ ಸದಸ್ಯ ಕಿರಣ್ ಕುಮಾರ್ ಮಂಜಿಲ ಇವರು ಶೌಚಾಲಯ ಹಾಗೂ ಸ್ನಾನದ ಕೊಠಡಿ ನಿರ್ಮಿಸಿ ಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕಿರಣ್ ಮಂಜಿಲರವರು ಸುಮಾರು ರೂ 70ಸಾವಿರ ಖರ್ಚು ಮಾಡಿ ನಿರ್ಮಿಸಿದ ಶೌಚಾಲಯ ಹಾಗೂ ಸ್ಥಾನದ ಕೊಠಡಿಯನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಕಿರಣ್ ಮಂಜಿಲರವರು ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, ಸಮಾಜ ಸೇವೆಯಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡಿರುತ್ತಾರೆ. ಇವರ ಹುಟ್ಟುವಹಬ್ಬದ ದಿನದಂದು ಶೌಚಾಲಯವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಅಧ್ಯಕ್ಷರಾದ ರಾಮಚಂದ್ರ ಶೆಟ್ಟಿಗಾರ್, ಕಾರ್ಯದರ್ಶಿಯಾದ ಐವನ್ ಮೇನೆಜಸ್, ಸಹಾಯಕ ಗವರ್ನರ್ ರಾಘವೇಂದ್ರ ಭಟ್, ಪದಾಧಿಕಾರಿಗಳಾದ ಹರಿಪ್ರಸಾದ್ ಶೆಟ್ಟಿ, ಶರಾಲ್ಡ್ ಕ್ರಾಸ್ತಾ., ರೋಡಲ್ಫ್ ಮಾಸ್ಟರ್,ವೇಣೂರು ಗ್ರಾ. ಪಂ. ಮಾಜಿ ಸದಸ್ಯರಾದ ರಾಜೇಶ್ ಮೂಡುಕೋಡಿ, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ ಅಜ್ಜಾಡಿ, ಭಾರತೀಯ ಜನತಾ ಪಕ್ಷದ ಬೂತ್ ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಉಮನೊಟ್ಟು ಹಾಗೂ ಪದಾಧಿಕಾರಿಗಳಾದ ಗಣೇಶ್ ಶೆಟ್ಟಿಗಾರ್, ರಾಧಾಕೃಷ್ಣ ಶೆಟ್ಟಿ ಉಗ್ರೋಡಿ, ಆಶಾ ಎಸ್ ಶೆಟ್ಟಿ, ಉಮೇಶ್ ಶೆಟ್ಟಿ ಪಾಳ್ಯ, ಸಂತೋಷ್ ಮಂಜಿಲ, ರಾಜೇಶ್ ಹುಲಿಮೇರು, ಸುರೇಶ್ ಮಂಜಿಲ, ನಿತೇಶ್ ಕುಂಜಾಡಿ, ಸುರೇಶ್. ಎಚ್.ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya
error: Content is protected !!