23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

ಉಜಿರೆ : ಉಜಿರೆ ಹಳೆಪೇಟೆಯ 63 ವರ್ಷ ಪ್ರಾಯದ ಎ. ರಾಜರಾಮ ನಾಯಕ್ ಎಂಬವರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಸೊಂಟ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೊಂಟದ ಕೀಳು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಎರಡು ಶಸ್ತ್ರಚಿಕಿತ್ಸೆಗಳನ್ನು ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಶತಾನಂದ ಪ್ರಸಾದ್ ರಾವ್ ಡಾ| ಹರೀಶ್ ಬಿ.ಎಸ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರೀತ್ ಆರ್ ಶೆಟ್ಟಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿದರು.
ಟೋಟಲ್ ನೀ ರಿಪ್ಲೇಸ್‌ಮೆಂಟ್ ಹಾಗೂ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕೃತಕ ಲೋಹದ ಕೀಲುಗಳನ್ನು ಅಳವಡಿಸಲಾಗುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈಗಾಗಲೇ ಹಲವಾರು ಟೋಟಲ್ ನೀ ರಿಪ್ಲೇಸ್‌ಮೆಂಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಹಾಗೂ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.
ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತಿದೆ. ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಹರ್ಷ ವ್ಯಕ್ತಪಡಿಸಿದರು ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya
error: Content is protected !!