September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ ಮುಖ್ಯ ರಸ್ತೆಯ ಸೇತುವೆ ಬಳಿ, ದಾಮೋಧರ ಆಸ್ಪತ್ರೆ ಪಕ್ಕದ ನಿವಾಸಿ ನಗರದ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅಬೂಬಕ್ಕರ್ (56) ಅವರು ಕರ್ತವ್ಯದಲ್ಲಿರುವಂತೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜು.24 ರಂದು ನಡೆದಿದೆ.
ಮೂಲತಃ ಬಂಗಾಡಿ ನಿವಾಸಿ ಇಬ್ರಾಹಿಂ ಮತ್ತು ಖತೀಜಮ್ಮ ದಂಪತಿಯ ದ್ವಿತೀಯ ಪುತ್ರರಾಗಿದ್ದ ಅಬೂಬಕ್ಕರ್ ಅವರು ಬೆಳ್ತಂಗಡಿಯಲ್ಲಿ ಸುಮಾರು 30 ವರ್ಷಗಳಿಂದ ಬೆಳ್ತಂಗಡಿ ಭಾರತ್ ಬೀಡಿ ಕಚೇರಿಯ ಮುಂಭಾಗದಲ್ಲಿ ಸ್ವಪ್ನ ಎಂಬ ಹೆಸರಿನ ಹೊಟೇಲ್ ನಡೆಸುತ್ತಿದ್ದರು. ಬೆಳಿಗ್ಗೆ ಎಂದಿನಂತೆ ಕರ್ತವ್ಯದಲ್ಲಿರುವ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕೆಲಸದವರಾದ ನಿಝಾರ್, ಪಕ್ಕದ ಗೇರೇಜ್‌ನ ಪ್ರವೀಣ್ ಮತ್ತಿತರರು ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಅವರಿಗೆ ಹೃದಯಾಘಾತವಾಗಿ ಮಧ್ಯಾಹ್ನದ ವೇಳೆ ಕೊನೆಯುಸಿರೆಳೆದರು.
ಸರಳ ಸಜ್ಜನಿಕೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದ‌ ಅವರು, ಹೊಟೇಲ್‌ಗೆ ಕೈಚಾಚಿ ಬರುವ ಅನೇಕ ಮಂದಿ ಭಿಕ್ಷುಕರಿಗೆ ಉಚಿತವಾಗಿ ಊಟ ನೀಡುತ್ತಿದ್ದರು.

ಮೃತರು ತಾಯಿ ಖತೀಜಮ್ಮ, ಪತ್ನಿ ಆಝ್‌ರಾ, ಇಬ್ಬರು ಹೆಣ್ಣು ಮಕ್ಕಳಾದ ರೈಹಾನಾ ಮತ್ತು ಅಫ್ರೀನಾ, ಓರ್ವ ಪುತ್ರ ಮುಹಮ್ಮದ್ ತೌಫೀಕ್, ಸಹೋದರರಾದ ಯೂಸುಫ್, ಉಮರ್ ಮತ್ತು ಉಸ್ಮಾನ್, ಸಹೋದರಿಯರಾದ ಮೈಮುನಾ ಮತ್ತು ಝುಬೈದಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya
error: Content is protected !!