25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ ಮುಖ್ಯ ರಸ್ತೆಯ ಸೇತುವೆ ಬಳಿ, ದಾಮೋಧರ ಆಸ್ಪತ್ರೆ ಪಕ್ಕದ ನಿವಾಸಿ ನಗರದ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅಬೂಬಕ್ಕರ್ (56) ಅವರು ಕರ್ತವ್ಯದಲ್ಲಿರುವಂತೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜು.24 ರಂದು ನಡೆದಿದೆ.
ಮೂಲತಃ ಬಂಗಾಡಿ ನಿವಾಸಿ ಇಬ್ರಾಹಿಂ ಮತ್ತು ಖತೀಜಮ್ಮ ದಂಪತಿಯ ದ್ವಿತೀಯ ಪುತ್ರರಾಗಿದ್ದ ಅಬೂಬಕ್ಕರ್ ಅವರು ಬೆಳ್ತಂಗಡಿಯಲ್ಲಿ ಸುಮಾರು 30 ವರ್ಷಗಳಿಂದ ಬೆಳ್ತಂಗಡಿ ಭಾರತ್ ಬೀಡಿ ಕಚೇರಿಯ ಮುಂಭಾಗದಲ್ಲಿ ಸ್ವಪ್ನ ಎಂಬ ಹೆಸರಿನ ಹೊಟೇಲ್ ನಡೆಸುತ್ತಿದ್ದರು. ಬೆಳಿಗ್ಗೆ ಎಂದಿನಂತೆ ಕರ್ತವ್ಯದಲ್ಲಿರುವ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕೆಲಸದವರಾದ ನಿಝಾರ್, ಪಕ್ಕದ ಗೇರೇಜ್‌ನ ಪ್ರವೀಣ್ ಮತ್ತಿತರರು ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಅವರಿಗೆ ಹೃದಯಾಘಾತವಾಗಿ ಮಧ್ಯಾಹ್ನದ ವೇಳೆ ಕೊನೆಯುಸಿರೆಳೆದರು.
ಸರಳ ಸಜ್ಜನಿಕೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದ‌ ಅವರು, ಹೊಟೇಲ್‌ಗೆ ಕೈಚಾಚಿ ಬರುವ ಅನೇಕ ಮಂದಿ ಭಿಕ್ಷುಕರಿಗೆ ಉಚಿತವಾಗಿ ಊಟ ನೀಡುತ್ತಿದ್ದರು.

ಮೃತರು ತಾಯಿ ಖತೀಜಮ್ಮ, ಪತ್ನಿ ಆಝ್‌ರಾ, ಇಬ್ಬರು ಹೆಣ್ಣು ಮಕ್ಕಳಾದ ರೈಹಾನಾ ಮತ್ತು ಅಫ್ರೀನಾ, ಓರ್ವ ಪುತ್ರ ಮುಹಮ್ಮದ್ ತೌಫೀಕ್, ಸಹೋದರರಾದ ಯೂಸುಫ್, ಉಮರ್ ಮತ್ತು ಉಸ್ಮಾನ್, ಸಹೋದರಿಯರಾದ ಮೈಮುನಾ ಮತ್ತು ಝುಬೈದಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya
error: Content is protected !!