26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷ ನವೀನ್ ಕೆ. ರವರ ಮನವಿ ಮೇರೆಗೆ, ಶಿರಾಡಿ ಗ್ರಾಮ ವಿಕಾಸ ತಂಡದ ಅಧ್ಯಕ್ಷ ಸುವಿನ್ ಡಿ ಕುದ್ಕೋಳಿ ಇವರ ನೇತೃತ್ವದಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರು ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ಥಳಕ್ಕೆ ತೆರಳಿ ಅಪಾಯಕಾರಿಯಾಗಿದ್ದ ಮರದ ಉಳಿದ ಗೆಲ್ಲುಗಳನ್ನು ತೆರವು ಗೊಳಿಸಿ ಛಾವಣಿಗೆ ಹೊಸ ಸಿಮೆಂಟ್ ಶೀಟ್ಗಳನ್ನು ಅಳವಡಿಸಿಕೊಟ್ಟರು.

ಸುರಿಯುತ್ತಿರುವ ಮಳೆಯಲ್ಲಿಯೇ ನಡೆದ ಈ ಕಾರ್ಯಾಚರಣೆಯಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರಾದ ಹೊನ್ನಪ್ಪ ಕುದ್ಕೋಳಿ, ಧರ್ಮಪಾಲ ಕುದ್ಕೋಳಿ, ಗಂಗಾಧರ ಕುದ್ಕೋಳಿ, ಧನುಷ್ ಕುದ್ಕೋಳಿ, ಕಿಶಾನ್ ಕುದ್ಕೋಳಿ, ಘಟಕ ಪ್ರತಿನಿಧಿ ಆನಂದ ನಾಯ್ಕ್ ಅರಸಿನಮಕ್ಕಿ, ಸದಸ್ಯರುಗಳಾದ ಅವಿನಾಶ್ ಭಿಡೆ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,ಕುಶಾಲಪ್ಪ ಗೌಡ ಬದ್ರಿಜಾಲು ,ಚೇತನ್ ರೆಖ್ಯ, ಉಜಿರೆ ಘಟಕದ ಸಚಿನ್ ಭಿಡೆ ಹಾಗೂ ರಮೇಶ್ ಬೈರಕಟ್ಟ ಭಾಗವಹಿಸಿದರು. .

ಈ ಸಂದರ್ಭದಲ್ಲಿ ವಿಶ್ವನಾಥ ಗೌಡ ಪರ್ಕಳ ಹಾಗೂ ಮನೆಯವರು, ಅರಸಿನಮಕ್ಕಿ ಪಂಚಾಯತ್ ಸದಸ್ಯ ಕಿರಣ್ ಕೆರೆಜಾಲು ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya
error: Content is protected !!