23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷ ನವೀನ್ ಕೆ. ರವರ ಮನವಿ ಮೇರೆಗೆ, ಶಿರಾಡಿ ಗ್ರಾಮ ವಿಕಾಸ ತಂಡದ ಅಧ್ಯಕ್ಷ ಸುವಿನ್ ಡಿ ಕುದ್ಕೋಳಿ ಇವರ ನೇತೃತ್ವದಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರು ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ಥಳಕ್ಕೆ ತೆರಳಿ ಅಪಾಯಕಾರಿಯಾಗಿದ್ದ ಮರದ ಉಳಿದ ಗೆಲ್ಲುಗಳನ್ನು ತೆರವು ಗೊಳಿಸಿ ಛಾವಣಿಗೆ ಹೊಸ ಸಿಮೆಂಟ್ ಶೀಟ್ಗಳನ್ನು ಅಳವಡಿಸಿಕೊಟ್ಟರು.

ಸುರಿಯುತ್ತಿರುವ ಮಳೆಯಲ್ಲಿಯೇ ನಡೆದ ಈ ಕಾರ್ಯಾಚರಣೆಯಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರಾದ ಹೊನ್ನಪ್ಪ ಕುದ್ಕೋಳಿ, ಧರ್ಮಪಾಲ ಕುದ್ಕೋಳಿ, ಗಂಗಾಧರ ಕುದ್ಕೋಳಿ, ಧನುಷ್ ಕುದ್ಕೋಳಿ, ಕಿಶಾನ್ ಕುದ್ಕೋಳಿ, ಘಟಕ ಪ್ರತಿನಿಧಿ ಆನಂದ ನಾಯ್ಕ್ ಅರಸಿನಮಕ್ಕಿ, ಸದಸ್ಯರುಗಳಾದ ಅವಿನಾಶ್ ಭಿಡೆ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,ಕುಶಾಲಪ್ಪ ಗೌಡ ಬದ್ರಿಜಾಲು ,ಚೇತನ್ ರೆಖ್ಯ, ಉಜಿರೆ ಘಟಕದ ಸಚಿನ್ ಭಿಡೆ ಹಾಗೂ ರಮೇಶ್ ಬೈರಕಟ್ಟ ಭಾಗವಹಿಸಿದರು. .

ಈ ಸಂದರ್ಭದಲ್ಲಿ ವಿಶ್ವನಾಥ ಗೌಡ ಪರ್ಕಳ ಹಾಗೂ ಮನೆಯವರು, ಅರಸಿನಮಕ್ಕಿ ಪಂಚಾಯತ್ ಸದಸ್ಯ ಕಿರಣ್ ಕೆರೆಜಾಲು ಸಹಕರಿಸಿದರು.

Related posts

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಉಜಿರೆ ಶ್ರೀ ಧ.ಮ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿವ್ಯಕ್ತಿ ಧಾರೆ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!