25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

ಉಜಿರೆ : ಉಜಿರೆ ಹಳೆಪೇಟೆಯ 63 ವರ್ಷ ಪ್ರಾಯದ ಎ. ರಾಜರಾಮ ನಾಯಕ್ ಎಂಬವರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಸೊಂಟ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೊಂಟದ ಕೀಳು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಎರಡು ಶಸ್ತ್ರಚಿಕಿತ್ಸೆಗಳನ್ನು ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಶತಾನಂದ ಪ್ರಸಾದ್ ರಾವ್ ಡಾ| ಹರೀಶ್ ಬಿ.ಎಸ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರೀತ್ ಆರ್ ಶೆಟ್ಟಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿದರು.
ಟೋಟಲ್ ನೀ ರಿಪ್ಲೇಸ್‌ಮೆಂಟ್ ಹಾಗೂ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕೃತಕ ಲೋಹದ ಕೀಲುಗಳನ್ನು ಅಳವಡಿಸಲಾಗುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈಗಾಗಲೇ ಹಲವಾರು ಟೋಟಲ್ ನೀ ರಿಪ್ಲೇಸ್‌ಮೆಂಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಹಾಗೂ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.
ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತಿದೆ. ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಹರ್ಷ ವ್ಯಕ್ತಪಡಿಸಿದರು ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!