25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ ಮುಖ್ಯ ರಸ್ತೆಯ ಸೇತುವೆ ಬಳಿ, ದಾಮೋಧರ ಆಸ್ಪತ್ರೆ ಪಕ್ಕದ ನಿವಾಸಿ ನಗರದ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅಬೂಬಕ್ಕರ್ (56) ಅವರು ಕರ್ತವ್ಯದಲ್ಲಿರುವಂತೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜು.24 ರಂದು ನಡೆದಿದೆ.
ಮೂಲತಃ ಬಂಗಾಡಿ ನಿವಾಸಿ ಇಬ್ರಾಹಿಂ ಮತ್ತು ಖತೀಜಮ್ಮ ದಂಪತಿಯ ದ್ವಿತೀಯ ಪುತ್ರರಾಗಿದ್ದ ಅಬೂಬಕ್ಕರ್ ಅವರು ಬೆಳ್ತಂಗಡಿಯಲ್ಲಿ ಸುಮಾರು 30 ವರ್ಷಗಳಿಂದ ಬೆಳ್ತಂಗಡಿ ಭಾರತ್ ಬೀಡಿ ಕಚೇರಿಯ ಮುಂಭಾಗದಲ್ಲಿ ಸ್ವಪ್ನ ಎಂಬ ಹೆಸರಿನ ಹೊಟೇಲ್ ನಡೆಸುತ್ತಿದ್ದರು. ಬೆಳಿಗ್ಗೆ ಎಂದಿನಂತೆ ಕರ್ತವ್ಯದಲ್ಲಿರುವ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕೆಲಸದವರಾದ ನಿಝಾರ್, ಪಕ್ಕದ ಗೇರೇಜ್‌ನ ಪ್ರವೀಣ್ ಮತ್ತಿತರರು ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಅವರಿಗೆ ಹೃದಯಾಘಾತವಾಗಿ ಮಧ್ಯಾಹ್ನದ ವೇಳೆ ಕೊನೆಯುಸಿರೆಳೆದರು.
ಸರಳ ಸಜ್ಜನಿಕೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದ‌ ಅವರು, ಹೊಟೇಲ್‌ಗೆ ಕೈಚಾಚಿ ಬರುವ ಅನೇಕ ಮಂದಿ ಭಿಕ್ಷುಕರಿಗೆ ಉಚಿತವಾಗಿ ಊಟ ನೀಡುತ್ತಿದ್ದರು.

ಮೃತರು ತಾಯಿ ಖತೀಜಮ್ಮ, ಪತ್ನಿ ಆಝ್‌ರಾ, ಇಬ್ಬರು ಹೆಣ್ಣು ಮಕ್ಕಳಾದ ರೈಹಾನಾ ಮತ್ತು ಅಫ್ರೀನಾ, ಓರ್ವ ಪುತ್ರ ಮುಹಮ್ಮದ್ ತೌಫೀಕ್, ಸಹೋದರರಾದ ಯೂಸುಫ್, ಉಮರ್ ಮತ್ತು ಉಸ್ಮಾನ್, ಸಹೋದರಿಯರಾದ ಮೈಮುನಾ ಮತ್ತು ಝುಬೈದಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya
error: Content is protected !!