September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಅಂಗವಾಗಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ವತಿಯಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಗೆ ಉಚಿತವಾಗಿ ಒಂದು ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ನ್ನು ಕೊಡುಗೆಯಾಗಿ ನೀಡಿ ಸಹಕರಿಸಿದರು.

ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಅಮರೇಶ್ ಮಾತನಾಡಿ ಮಕ್ಕಳು ಅಂದರೆ ದೇವರಿಗೆ ಸಮಾನರಾದವರು, ಮುಗ್ದ ಮನಸಿನ ಈ ಮಕ್ಕಳು ನಿರ್ಮಲ ಮನಸ್ಸಿನಿಂದ ಕೂಡಿರುತ್ತಾರೆ, ಪ್ರಾಥಮಿಕ ಶಾಲೆಗಳು ಎಂದರೆ ತುಂಬಾ ಪ್ರೀತಿ, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಮೇಲೆ ಅಪಾರವಾದ ಗೌರವವಿದೆ. ಹೀಗಾಗಿ ನಾವು ಈ ಶಾಲೆಗೆ ನೋಟೀಸ್ ಬೋರ್ಡ್ ಮತ್ತು ಸೌಂಡ್ ಬಾಕ್ಸ್ ನೀಡಿದ್ದೇವೆ ಎಂದು ಅಭಿಮಾನದ ಮಾತುಗಳನ್ನು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ರವರು ಮಕ್ಕಳೆಲ್ಲರೂ ಕೂಡ ಇವತ್ತು ನೀಡಿದ ಕೊಡುಗೆಯನ್ನು ಶಿಕ್ಷಣದ ಉದ್ದೇಶಕ್ಕಾಗಿ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಮತ್ತು ಎಲ್ಲಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಅಶ್ವಿತ್ ಶೆಟ್ಟಿ, ಧನಂಜಯ್, ಹರ್ಷಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪವನ್ ಕುಮಾರ್ ಸ್ವಾಗತಿಸಿದರು, ಶ್ರೀಮತಿ ಸುಜಾತಾ ಬಿ ರವರು ಧನ್ಯವಾದಗೈದ ಕಾರ್ಯಕ್ರಮ ವನ್ನು ಶ್ರೀ ನಿಶಾಂತ್ ಕುಮಾರ್ ನಿರೂಪಿಸಿದರು.

ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya
error: Content is protected !!