23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಅಂಗವಾಗಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ವತಿಯಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಗೆ ಉಚಿತವಾಗಿ ಒಂದು ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ನ್ನು ಕೊಡುಗೆಯಾಗಿ ನೀಡಿ ಸಹಕರಿಸಿದರು.

ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಅಮರೇಶ್ ಮಾತನಾಡಿ ಮಕ್ಕಳು ಅಂದರೆ ದೇವರಿಗೆ ಸಮಾನರಾದವರು, ಮುಗ್ದ ಮನಸಿನ ಈ ಮಕ್ಕಳು ನಿರ್ಮಲ ಮನಸ್ಸಿನಿಂದ ಕೂಡಿರುತ್ತಾರೆ, ಪ್ರಾಥಮಿಕ ಶಾಲೆಗಳು ಎಂದರೆ ತುಂಬಾ ಪ್ರೀತಿ, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಮೇಲೆ ಅಪಾರವಾದ ಗೌರವವಿದೆ. ಹೀಗಾಗಿ ನಾವು ಈ ಶಾಲೆಗೆ ನೋಟೀಸ್ ಬೋರ್ಡ್ ಮತ್ತು ಸೌಂಡ್ ಬಾಕ್ಸ್ ನೀಡಿದ್ದೇವೆ ಎಂದು ಅಭಿಮಾನದ ಮಾತುಗಳನ್ನು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ರವರು ಮಕ್ಕಳೆಲ್ಲರೂ ಕೂಡ ಇವತ್ತು ನೀಡಿದ ಕೊಡುಗೆಯನ್ನು ಶಿಕ್ಷಣದ ಉದ್ದೇಶಕ್ಕಾಗಿ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಮತ್ತು ಎಲ್ಲಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಅಶ್ವಿತ್ ಶೆಟ್ಟಿ, ಧನಂಜಯ್, ಹರ್ಷಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪವನ್ ಕುಮಾರ್ ಸ್ವಾಗತಿಸಿದರು, ಶ್ರೀಮತಿ ಸುಜಾತಾ ಬಿ ರವರು ಧನ್ಯವಾದಗೈದ ಕಾರ್ಯಕ್ರಮ ವನ್ನು ಶ್ರೀ ನಿಶಾಂತ್ ಕುಮಾರ್ ನಿರೂಪಿಸಿದರು.

ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya
error: Content is protected !!