22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಅಂಗವಾಗಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ವತಿಯಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಗೆ ಉಚಿತವಾಗಿ ಒಂದು ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ನ್ನು ಕೊಡುಗೆಯಾಗಿ ನೀಡಿ ಸಹಕರಿಸಿದರು.

ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಅಮರೇಶ್ ಮಾತನಾಡಿ ಮಕ್ಕಳು ಅಂದರೆ ದೇವರಿಗೆ ಸಮಾನರಾದವರು, ಮುಗ್ದ ಮನಸಿನ ಈ ಮಕ್ಕಳು ನಿರ್ಮಲ ಮನಸ್ಸಿನಿಂದ ಕೂಡಿರುತ್ತಾರೆ, ಪ್ರಾಥಮಿಕ ಶಾಲೆಗಳು ಎಂದರೆ ತುಂಬಾ ಪ್ರೀತಿ, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಮೇಲೆ ಅಪಾರವಾದ ಗೌರವವಿದೆ. ಹೀಗಾಗಿ ನಾವು ಈ ಶಾಲೆಗೆ ನೋಟೀಸ್ ಬೋರ್ಡ್ ಮತ್ತು ಸೌಂಡ್ ಬಾಕ್ಸ್ ನೀಡಿದ್ದೇವೆ ಎಂದು ಅಭಿಮಾನದ ಮಾತುಗಳನ್ನು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ರವರು ಮಕ್ಕಳೆಲ್ಲರೂ ಕೂಡ ಇವತ್ತು ನೀಡಿದ ಕೊಡುಗೆಯನ್ನು ಶಿಕ್ಷಣದ ಉದ್ದೇಶಕ್ಕಾಗಿ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಮತ್ತು ಎಲ್ಲಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಅಶ್ವಿತ್ ಶೆಟ್ಟಿ, ಧನಂಜಯ್, ಹರ್ಷಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪವನ್ ಕುಮಾರ್ ಸ್ವಾಗತಿಸಿದರು, ಶ್ರೀಮತಿ ಸುಜಾತಾ ಬಿ ರವರು ಧನ್ಯವಾದಗೈದ ಕಾರ್ಯಕ್ರಮ ವನ್ನು ಶ್ರೀ ನಿಶಾಂತ್ ಕುಮಾರ್ ನಿರೂಪಿಸಿದರು.

ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!