25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷ ನವೀನ್ ಕೆ. ರವರ ಮನವಿ ಮೇರೆಗೆ, ಶಿರಾಡಿ ಗ್ರಾಮ ವಿಕಾಸ ತಂಡದ ಅಧ್ಯಕ್ಷ ಸುವಿನ್ ಡಿ ಕುದ್ಕೋಳಿ ಇವರ ನೇತೃತ್ವದಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರು ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ಥಳಕ್ಕೆ ತೆರಳಿ ಅಪಾಯಕಾರಿಯಾಗಿದ್ದ ಮರದ ಉಳಿದ ಗೆಲ್ಲುಗಳನ್ನು ತೆರವು ಗೊಳಿಸಿ ಛಾವಣಿಗೆ ಹೊಸ ಸಿಮೆಂಟ್ ಶೀಟ್ಗಳನ್ನು ಅಳವಡಿಸಿಕೊಟ್ಟರು.

ಸುರಿಯುತ್ತಿರುವ ಮಳೆಯಲ್ಲಿಯೇ ನಡೆದ ಈ ಕಾರ್ಯಾಚರಣೆಯಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರಾದ ಹೊನ್ನಪ್ಪ ಕುದ್ಕೋಳಿ, ಧರ್ಮಪಾಲ ಕುದ್ಕೋಳಿ, ಗಂಗಾಧರ ಕುದ್ಕೋಳಿ, ಧನುಷ್ ಕುದ್ಕೋಳಿ, ಕಿಶಾನ್ ಕುದ್ಕೋಳಿ, ಘಟಕ ಪ್ರತಿನಿಧಿ ಆನಂದ ನಾಯ್ಕ್ ಅರಸಿನಮಕ್ಕಿ, ಸದಸ್ಯರುಗಳಾದ ಅವಿನಾಶ್ ಭಿಡೆ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,ಕುಶಾಲಪ್ಪ ಗೌಡ ಬದ್ರಿಜಾಲು ,ಚೇತನ್ ರೆಖ್ಯ, ಉಜಿರೆ ಘಟಕದ ಸಚಿನ್ ಭಿಡೆ ಹಾಗೂ ರಮೇಶ್ ಬೈರಕಟ್ಟ ಭಾಗವಹಿಸಿದರು. .

ಈ ಸಂದರ್ಭದಲ್ಲಿ ವಿಶ್ವನಾಥ ಗೌಡ ಪರ್ಕಳ ಹಾಗೂ ಮನೆಯವರು, ಅರಸಿನಮಕ್ಕಿ ಪಂಚಾಯತ್ ಸದಸ್ಯ ಕಿರಣ್ ಕೆರೆಜಾಲು ಸಹಕರಿಸಿದರು.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya
error: Content is protected !!