27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷ ನವೀನ್ ಕೆ. ರವರ ಮನವಿ ಮೇರೆಗೆ, ಶಿರಾಡಿ ಗ್ರಾಮ ವಿಕಾಸ ತಂಡದ ಅಧ್ಯಕ್ಷ ಸುವಿನ್ ಡಿ ಕುದ್ಕೋಳಿ ಇವರ ನೇತೃತ್ವದಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರು ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ಥಳಕ್ಕೆ ತೆರಳಿ ಅಪಾಯಕಾರಿಯಾಗಿದ್ದ ಮರದ ಉಳಿದ ಗೆಲ್ಲುಗಳನ್ನು ತೆರವು ಗೊಳಿಸಿ ಛಾವಣಿಗೆ ಹೊಸ ಸಿಮೆಂಟ್ ಶೀಟ್ಗಳನ್ನು ಅಳವಡಿಸಿಕೊಟ್ಟರು.

ಸುರಿಯುತ್ತಿರುವ ಮಳೆಯಲ್ಲಿಯೇ ನಡೆದ ಈ ಕಾರ್ಯಾಚರಣೆಯಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರಾದ ಹೊನ್ನಪ್ಪ ಕುದ್ಕೋಳಿ, ಧರ್ಮಪಾಲ ಕುದ್ಕೋಳಿ, ಗಂಗಾಧರ ಕುದ್ಕೋಳಿ, ಧನುಷ್ ಕುದ್ಕೋಳಿ, ಕಿಶಾನ್ ಕುದ್ಕೋಳಿ, ಘಟಕ ಪ್ರತಿನಿಧಿ ಆನಂದ ನಾಯ್ಕ್ ಅರಸಿನಮಕ್ಕಿ, ಸದಸ್ಯರುಗಳಾದ ಅವಿನಾಶ್ ಭಿಡೆ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,ಕುಶಾಲಪ್ಪ ಗೌಡ ಬದ್ರಿಜಾಲು ,ಚೇತನ್ ರೆಖ್ಯ, ಉಜಿರೆ ಘಟಕದ ಸಚಿನ್ ಭಿಡೆ ಹಾಗೂ ರಮೇಶ್ ಬೈರಕಟ್ಟ ಭಾಗವಹಿಸಿದರು. .

ಈ ಸಂದರ್ಭದಲ್ಲಿ ವಿಶ್ವನಾಥ ಗೌಡ ಪರ್ಕಳ ಹಾಗೂ ಮನೆಯವರು, ಅರಸಿನಮಕ್ಕಿ ಪಂಚಾಯತ್ ಸದಸ್ಯ ಕಿರಣ್ ಕೆರೆಜಾಲು ಸಹಕರಿಸಿದರು.

Related posts

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya
error: Content is protected !!