26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷ ನವೀನ್ ಕೆ. ರವರ ಮನವಿ ಮೇರೆಗೆ, ಶಿರಾಡಿ ಗ್ರಾಮ ವಿಕಾಸ ತಂಡದ ಅಧ್ಯಕ್ಷ ಸುವಿನ್ ಡಿ ಕುದ್ಕೋಳಿ ಇವರ ನೇತೃತ್ವದಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರು ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ಥಳಕ್ಕೆ ತೆರಳಿ ಅಪಾಯಕಾರಿಯಾಗಿದ್ದ ಮರದ ಉಳಿದ ಗೆಲ್ಲುಗಳನ್ನು ತೆರವು ಗೊಳಿಸಿ ಛಾವಣಿಗೆ ಹೊಸ ಸಿಮೆಂಟ್ ಶೀಟ್ಗಳನ್ನು ಅಳವಡಿಸಿಕೊಟ್ಟರು.

ಸುರಿಯುತ್ತಿರುವ ಮಳೆಯಲ್ಲಿಯೇ ನಡೆದ ಈ ಕಾರ್ಯಾಚರಣೆಯಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರಾದ ಹೊನ್ನಪ್ಪ ಕುದ್ಕೋಳಿ, ಧರ್ಮಪಾಲ ಕುದ್ಕೋಳಿ, ಗಂಗಾಧರ ಕುದ್ಕೋಳಿ, ಧನುಷ್ ಕುದ್ಕೋಳಿ, ಕಿಶಾನ್ ಕುದ್ಕೋಳಿ, ಘಟಕ ಪ್ರತಿನಿಧಿ ಆನಂದ ನಾಯ್ಕ್ ಅರಸಿನಮಕ್ಕಿ, ಸದಸ್ಯರುಗಳಾದ ಅವಿನಾಶ್ ಭಿಡೆ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,ಕುಶಾಲಪ್ಪ ಗೌಡ ಬದ್ರಿಜಾಲು ,ಚೇತನ್ ರೆಖ್ಯ, ಉಜಿರೆ ಘಟಕದ ಸಚಿನ್ ಭಿಡೆ ಹಾಗೂ ರಮೇಶ್ ಬೈರಕಟ್ಟ ಭಾಗವಹಿಸಿದರು. .

ಈ ಸಂದರ್ಭದಲ್ಲಿ ವಿಶ್ವನಾಥ ಗೌಡ ಪರ್ಕಳ ಹಾಗೂ ಮನೆಯವರು, ಅರಸಿನಮಕ್ಕಿ ಪಂಚಾಯತ್ ಸದಸ್ಯ ಕಿರಣ್ ಕೆರೆಜಾಲು ಸಹಕರಿಸಿದರು.

Related posts

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya
error: Content is protected !!