July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷ ನವೀನ್ ಕೆ. ರವರ ಮನವಿ ಮೇರೆಗೆ, ಶಿರಾಡಿ ಗ್ರಾಮ ವಿಕಾಸ ತಂಡದ ಅಧ್ಯಕ್ಷ ಸುವಿನ್ ಡಿ ಕುದ್ಕೋಳಿ ಇವರ ನೇತೃತ್ವದಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರು ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ಥಳಕ್ಕೆ ತೆರಳಿ ಅಪಾಯಕಾರಿಯಾಗಿದ್ದ ಮರದ ಉಳಿದ ಗೆಲ್ಲುಗಳನ್ನು ತೆರವು ಗೊಳಿಸಿ ಛಾವಣಿಗೆ ಹೊಸ ಸಿಮೆಂಟ್ ಶೀಟ್ಗಳನ್ನು ಅಳವಡಿಸಿಕೊಟ್ಟರು.

ಸುರಿಯುತ್ತಿರುವ ಮಳೆಯಲ್ಲಿಯೇ ನಡೆದ ಈ ಕಾರ್ಯಾಚರಣೆಯಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರಾದ ಹೊನ್ನಪ್ಪ ಕುದ್ಕೋಳಿ, ಧರ್ಮಪಾಲ ಕುದ್ಕೋಳಿ, ಗಂಗಾಧರ ಕುದ್ಕೋಳಿ, ಧನುಷ್ ಕುದ್ಕೋಳಿ, ಕಿಶಾನ್ ಕುದ್ಕೋಳಿ, ಘಟಕ ಪ್ರತಿನಿಧಿ ಆನಂದ ನಾಯ್ಕ್ ಅರಸಿನಮಕ್ಕಿ, ಸದಸ್ಯರುಗಳಾದ ಅವಿನಾಶ್ ಭಿಡೆ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,ಕುಶಾಲಪ್ಪ ಗೌಡ ಬದ್ರಿಜಾಲು ,ಚೇತನ್ ರೆಖ್ಯ, ಉಜಿರೆ ಘಟಕದ ಸಚಿನ್ ಭಿಡೆ ಹಾಗೂ ರಮೇಶ್ ಬೈರಕಟ್ಟ ಭಾಗವಹಿಸಿದರು. .

ಈ ಸಂದರ್ಭದಲ್ಲಿ ವಿಶ್ವನಾಥ ಗೌಡ ಪರ್ಕಳ ಹಾಗೂ ಮನೆಯವರು, ಅರಸಿನಮಕ್ಕಿ ಪಂಚಾಯತ್ ಸದಸ್ಯ ಕಿರಣ್ ಕೆರೆಜಾಲು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!