24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ ಮುಖ್ಯ ರಸ್ತೆಯ ಸೇತುವೆ ಬಳಿ, ದಾಮೋಧರ ಆಸ್ಪತ್ರೆ ಪಕ್ಕದ ನಿವಾಸಿ ನಗರದ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅಬೂಬಕ್ಕರ್ (56) ಅವರು ಕರ್ತವ್ಯದಲ್ಲಿರುವಂತೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜು.24 ರಂದು ನಡೆದಿದೆ.
ಮೂಲತಃ ಬಂಗಾಡಿ ನಿವಾಸಿ ಇಬ್ರಾಹಿಂ ಮತ್ತು ಖತೀಜಮ್ಮ ದಂಪತಿಯ ದ್ವಿತೀಯ ಪುತ್ರರಾಗಿದ್ದ ಅಬೂಬಕ್ಕರ್ ಅವರು ಬೆಳ್ತಂಗಡಿಯಲ್ಲಿ ಸುಮಾರು 30 ವರ್ಷಗಳಿಂದ ಬೆಳ್ತಂಗಡಿ ಭಾರತ್ ಬೀಡಿ ಕಚೇರಿಯ ಮುಂಭಾಗದಲ್ಲಿ ಸ್ವಪ್ನ ಎಂಬ ಹೆಸರಿನ ಹೊಟೇಲ್ ನಡೆಸುತ್ತಿದ್ದರು. ಬೆಳಿಗ್ಗೆ ಎಂದಿನಂತೆ ಕರ್ತವ್ಯದಲ್ಲಿರುವ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕೆಲಸದವರಾದ ನಿಝಾರ್, ಪಕ್ಕದ ಗೇರೇಜ್‌ನ ಪ್ರವೀಣ್ ಮತ್ತಿತರರು ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಅವರಿಗೆ ಹೃದಯಾಘಾತವಾಗಿ ಮಧ್ಯಾಹ್ನದ ವೇಳೆ ಕೊನೆಯುಸಿರೆಳೆದರು.
ಸರಳ ಸಜ್ಜನಿಕೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದ‌ ಅವರು, ಹೊಟೇಲ್‌ಗೆ ಕೈಚಾಚಿ ಬರುವ ಅನೇಕ ಮಂದಿ ಭಿಕ್ಷುಕರಿಗೆ ಉಚಿತವಾಗಿ ಊಟ ನೀಡುತ್ತಿದ್ದರು.

ಮೃತರು ತಾಯಿ ಖತೀಜಮ್ಮ, ಪತ್ನಿ ಆಝ್‌ರಾ, ಇಬ್ಬರು ಹೆಣ್ಣು ಮಕ್ಕಳಾದ ರೈಹಾನಾ ಮತ್ತು ಅಫ್ರೀನಾ, ಓರ್ವ ಪುತ್ರ ಮುಹಮ್ಮದ್ ತೌಫೀಕ್, ಸಹೋದರರಾದ ಯೂಸುಫ್, ಉಮರ್ ಮತ್ತು ಉಸ್ಮಾನ್, ಸಹೋದರಿಯರಾದ ಮೈಮುನಾ ಮತ್ತು ಝುಬೈದಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!