23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ ಮುಖ್ಯ ರಸ್ತೆಯ ಸೇತುವೆ ಬಳಿ, ದಾಮೋಧರ ಆಸ್ಪತ್ರೆ ಪಕ್ಕದ ನಿವಾಸಿ ನಗರದ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅಬೂಬಕ್ಕರ್ (56) ಅವರು ಕರ್ತವ್ಯದಲ್ಲಿರುವಂತೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜು.24 ರಂದು ನಡೆದಿದೆ.
ಮೂಲತಃ ಬಂಗಾಡಿ ನಿವಾಸಿ ಇಬ್ರಾಹಿಂ ಮತ್ತು ಖತೀಜಮ್ಮ ದಂಪತಿಯ ದ್ವಿತೀಯ ಪುತ್ರರಾಗಿದ್ದ ಅಬೂಬಕ್ಕರ್ ಅವರು ಬೆಳ್ತಂಗಡಿಯಲ್ಲಿ ಸುಮಾರು 30 ವರ್ಷಗಳಿಂದ ಬೆಳ್ತಂಗಡಿ ಭಾರತ್ ಬೀಡಿ ಕಚೇರಿಯ ಮುಂಭಾಗದಲ್ಲಿ ಸ್ವಪ್ನ ಎಂಬ ಹೆಸರಿನ ಹೊಟೇಲ್ ನಡೆಸುತ್ತಿದ್ದರು. ಬೆಳಿಗ್ಗೆ ಎಂದಿನಂತೆ ಕರ್ತವ್ಯದಲ್ಲಿರುವ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕೆಲಸದವರಾದ ನಿಝಾರ್, ಪಕ್ಕದ ಗೇರೇಜ್‌ನ ಪ್ರವೀಣ್ ಮತ್ತಿತರರು ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಅವರಿಗೆ ಹೃದಯಾಘಾತವಾಗಿ ಮಧ್ಯಾಹ್ನದ ವೇಳೆ ಕೊನೆಯುಸಿರೆಳೆದರು.
ಸರಳ ಸಜ್ಜನಿಕೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದ‌ ಅವರು, ಹೊಟೇಲ್‌ಗೆ ಕೈಚಾಚಿ ಬರುವ ಅನೇಕ ಮಂದಿ ಭಿಕ್ಷುಕರಿಗೆ ಉಚಿತವಾಗಿ ಊಟ ನೀಡುತ್ತಿದ್ದರು.

ಮೃತರು ತಾಯಿ ಖತೀಜಮ್ಮ, ಪತ್ನಿ ಆಝ್‌ರಾ, ಇಬ್ಬರು ಹೆಣ್ಣು ಮಕ್ಕಳಾದ ರೈಹಾನಾ ಮತ್ತು ಅಫ್ರೀನಾ, ಓರ್ವ ಪುತ್ರ ಮುಹಮ್ಮದ್ ತೌಫೀಕ್, ಸಹೋದರರಾದ ಯೂಸುಫ್, ಉಮರ್ ಮತ್ತು ಉಸ್ಮಾನ್, ಸಹೋದರಿಯರಾದ ಮೈಮುನಾ ಮತ್ತು ಝುಬೈದಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!