July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಅಂಗವಾಗಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ವತಿಯಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಗೆ ಉಚಿತವಾಗಿ ಒಂದು ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ನ್ನು ಕೊಡುಗೆಯಾಗಿ ನೀಡಿ ಸಹಕರಿಸಿದರು.

ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಅಮರೇಶ್ ಮಾತನಾಡಿ ಮಕ್ಕಳು ಅಂದರೆ ದೇವರಿಗೆ ಸಮಾನರಾದವರು, ಮುಗ್ದ ಮನಸಿನ ಈ ಮಕ್ಕಳು ನಿರ್ಮಲ ಮನಸ್ಸಿನಿಂದ ಕೂಡಿರುತ್ತಾರೆ, ಪ್ರಾಥಮಿಕ ಶಾಲೆಗಳು ಎಂದರೆ ತುಂಬಾ ಪ್ರೀತಿ, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಮೇಲೆ ಅಪಾರವಾದ ಗೌರವವಿದೆ. ಹೀಗಾಗಿ ನಾವು ಈ ಶಾಲೆಗೆ ನೋಟೀಸ್ ಬೋರ್ಡ್ ಮತ್ತು ಸೌಂಡ್ ಬಾಕ್ಸ್ ನೀಡಿದ್ದೇವೆ ಎಂದು ಅಭಿಮಾನದ ಮಾತುಗಳನ್ನು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ರವರು ಮಕ್ಕಳೆಲ್ಲರೂ ಕೂಡ ಇವತ್ತು ನೀಡಿದ ಕೊಡುಗೆಯನ್ನು ಶಿಕ್ಷಣದ ಉದ್ದೇಶಕ್ಕಾಗಿ ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ಮ್ಯಾನೇಜರ್ ಮತ್ತು ಎಲ್ಲಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಅಶ್ವಿತ್ ಶೆಟ್ಟಿ, ಧನಂಜಯ್, ಹರ್ಷಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪವನ್ ಕುಮಾರ್ ಸ್ವಾಗತಿಸಿದರು, ಶ್ರೀಮತಿ ಸುಜಾತಾ ಬಿ ರವರು ಧನ್ಯವಾದಗೈದ ಕಾರ್ಯಕ್ರಮ ವನ್ನು ಶ್ರೀ ನಿಶಾಂತ್ ಕುಮಾರ್ ನಿರೂಪಿಸಿದರು.

ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya
error: Content is protected !!