25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

ರೆಖ್ಯಾ :ಅರಸಿನಮಕ್ಕಿ ಗ್ರಾಮಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿನ ಶಾಲಿನಿ ಎಂಬ ಮಹಿಳೆಯ ಮನೆ ಮೇಲೆ ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿ (ಶೀಟ್)ಹಾನಿಯಾಗಿದೆ. ಅರಸಿನಮಕ್ಕಿ ಪಂಚಾಯತ್ ಅಧ್ಯಕ್ಷ ನವೀನ್ ಕೆ. ರವರ ಮನವಿ ಮೇರೆಗೆ, ಶಿರಾಡಿ ಗ್ರಾಮ ವಿಕಾಸ ತಂಡದ ಅಧ್ಯಕ್ಷ ಸುವಿನ್ ಡಿ ಕುದ್ಕೋಳಿ ಇವರ ನೇತೃತ್ವದಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರು ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸ್ಥಳಕ್ಕೆ ತೆರಳಿ ಅಪಾಯಕಾರಿಯಾಗಿದ್ದ ಮರದ ಉಳಿದ ಗೆಲ್ಲುಗಳನ್ನು ತೆರವು ಗೊಳಿಸಿ ಛಾವಣಿಗೆ ಹೊಸ ಸಿಮೆಂಟ್ ಶೀಟ್ಗಳನ್ನು ಅಳವಡಿಸಿಕೊಟ್ಟರು.

ಸುರಿಯುತ್ತಿರುವ ಮಳೆಯಲ್ಲಿಯೇ ನಡೆದ ಈ ಕಾರ್ಯಾಚರಣೆಯಲ್ಲಿ ಶಿರಾಡಿ ಗ್ರಾಮ ವಿಕಾಸ ತಂಡದ ಸದಸ್ಯರಾದ ಹೊನ್ನಪ್ಪ ಕುದ್ಕೋಳಿ, ಧರ್ಮಪಾಲ ಕುದ್ಕೋಳಿ, ಗಂಗಾಧರ ಕುದ್ಕೋಳಿ, ಧನುಷ್ ಕುದ್ಕೋಳಿ, ಕಿಶಾನ್ ಕುದ್ಕೋಳಿ, ಘಟಕ ಪ್ರತಿನಿಧಿ ಆನಂದ ನಾಯ್ಕ್ ಅರಸಿನಮಕ್ಕಿ, ಸದಸ್ಯರುಗಳಾದ ಅವಿನಾಶ್ ಭಿಡೆ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,ಕುಶಾಲಪ್ಪ ಗೌಡ ಬದ್ರಿಜಾಲು ,ಚೇತನ್ ರೆಖ್ಯ, ಉಜಿರೆ ಘಟಕದ ಸಚಿನ್ ಭಿಡೆ ಹಾಗೂ ರಮೇಶ್ ಬೈರಕಟ್ಟ ಭಾಗವಹಿಸಿದರು. .

ಈ ಸಂದರ್ಭದಲ್ಲಿ ವಿಶ್ವನಾಥ ಗೌಡ ಪರ್ಕಳ ಹಾಗೂ ಮನೆಯವರು, ಅರಸಿನಮಕ್ಕಿ ಪಂಚಾಯತ್ ಸದಸ್ಯ ಕಿರಣ್ ಕೆರೆಜಾಲು ಸಹಕರಿಸಿದರು.

Related posts

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya
error: Content is protected !!