ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ.

ಶಿಶಿಲದಿಂದ ಹೊಳೆಗಂಡಿಗೆ ಹೋಗುವ ರಸ್ತೆಯ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಬಸ್ ಗಳ ಚಾಲಕರು ಕೂಡಾ ಬಹಳಷ್ಟು ಜಾಗರೂಕತೆಯಿಂದ ಬಸ್ ಚಾಲನೆ ಮಾಡಬೇಕಾಗಿದ್ದು, ಕೂಡಲೇ ಸಂಬಂಧಪಟ್ಟವರು ರಸ್ತೆಗಳ ಗುಂಡಿ ಮುಚ್ಚುವ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಂಟಿಗಳನ್ನು ತೆಗೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Comment

error: Content is protected !!