25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

ಯುದ್ಧಭೂಮಿಯಲ್ಲಿ ಭಾರತಾಂಬೆಯ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡ ಧೀರರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಒಬ್ಬೊಬ್ಬ ವೀರನ ಒಂದೊಂದು ಕಥೆಯು ರೋಚಕ,ಮೈನವೀರೇಳಿಸುವಂತದ್ದು. ತಮ್ಮ ವೈಯಕ್ತಿಕ ಬದುಕಿನ ಸುಖಗಳನ್ನೆಲ್ಲಾ ತೊರೆದು ದೇಶಕ್ಕಾಗಿ ಮುಡಿಪಾಗಿಡುವ ಬದುಕು ಸೈನಿಕನದ್ದು. ಸೈನ್ಯದಲ್ಲಿ ಜೊತೆಗಿದ್ದವರು ನಮ್ಮ ಕೈಯಲ್ಲೇ,ಎದುರಲ್ಲೇ ಪ್ರಾಣ ತ್ಯಾಗ ಮಾಡಿರುವ ದೃಶ್ಯಗಳು ಇನ್ನೂ ಮಾಸದಂತಿದೆ. ದೇಶ ಸೇವೆಯೇ ಭಗವಂತನ ಸೇವೆಯೆಂದು ಪ್ರಾಮಾಣಿಕವಾಗಿ ಸೇವೆ ಮಾಡಿದ ತೃಪ್ತಿ ನಮಗಿದೆ. ನಮ್ಮ ಉಸಿರಿರುವವರೆಗೆ ಬೇರೆ ಬೇರೆ ರೂಪದಲ್ಲಿ ದೇಶಕ್ಕಾಗಿ ಸೇವೆ ಮಾಡೋ ಅವಕಾಶವಿದ್ದು, ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಮಾಜಿ ಸೈನಿಕ ಕಾಂಚೋಡು ಗೋಪಾಲಕೃಷ್ಣ ಭಟ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಕಾರ್ಗಿಲ್ ವಿಜಯ ದಿವಸ’ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ  ತಾವು ಸೈನಿಕನಾಗಿದ್ದಾಗ ಮೆರೆದ ಸಾಹಸವನ್ನು ಎಳೆ ಎಳೆಯಾಗಿ ಬಿಚ್ಚಿ ವಿದ್ಯಾರ್ಥಿಗಳಿಗೆ ವಿವರಿಸಿದರು.’ಜೈ ಜವಾನ್ ಜೈ ಕಿಸಾನ್ ನನ್ನ ಮೂಲ ಮಂತ್ರವಾಗಿದೆ ನಿವೃತ್ತಿ ಬಳಿಕ  ಕೃಷಿಕನಾಗಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕಾಲೇಜಿನ ದೈಹಿಕ ಶಿಕ್ಷಕ ಹಾಗೂ ಮಾಜಿ ಸೈನಿಕ ಲಕ್ಷ್ಮಣ್ ಜಿ.ಡಿಯವರು ಕಾರ್ಗಿಲ್ ಬಗ್ಗೆ ಪೂರ್ಣ ಮಾಹಿತಿ ನೀಡಿದರು. ಕಾರ್ಗಿಲ್ ಕದನ ಸಮಯ ಅಲ್ಲೇ ಇದ್ದ ತಮ್ಮ ಅನುಭವ ಹಂಚಿಕೊಂಡರು.

ಇನ್ನೊರ್ವ ಅತಿಥಿಯಾಗಿದ್ದ ಕಾಲೇಜಿನ ನಿಲಯ ಪಾಲಕರು ಹಾಗೂ ಮಾಜಿ ಸೈನಿಕರಾದ ವಿಶ್ವನಾಥ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅವರು ಅನ್ನ ಕೊಟ್ಟ ರೈತ ದೇಶಕ್ಕೆ ದುಡಿವ ಯೋಧನನ್ನು ಯಾವತ್ತೂ ಮರೆಯಬಾರದು, ತಮ್ಮ ಮನೋಬಲವನ್ನು ಗೆದ್ದು ಹೋರಾಡುವ ಸೈನಿಕ ಯಾವತ್ತೂ ನಮಗೆ ಮಾದರಿ ಎಂದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಮನೀಷ್ ಕುಮಾರ್ ಉಪಸ್ಥಿತರಿದ್ದರು.

ಕಾಲೇಜು ವತಿಯಿಂದ ವೇದಿಕೆಯಲ್ಲಿದ್ದ ಮಾಜಿ ಸೈನಿಕರನ್ನು  ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ದೇಶಕ್ಕಾಗಿ ಹೋರಾಡಿ ಮಡಿದ ಸೈನಿಕರಿಗೆ ಮೌನ ಪ್ರಾರ್ಥನೆ ಮಾಡಿ ಗೌರವ ಸೂಚಿಸಲಾಯಿತು.

ಸಂಸ್ಕೃತ ಉಪನ್ಯಾಸಕರಾದ ಮಹೇಶ್ಎಸ್.ಎಸ್ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹರ್ಷಿತ್ ವಂದಿಸಿದರು.

Related posts

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!