26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

ಯುದ್ಧಭೂಮಿಯಲ್ಲಿ ಭಾರತಾಂಬೆಯ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡ ಧೀರರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಒಬ್ಬೊಬ್ಬ ವೀರನ ಒಂದೊಂದು ಕಥೆಯು ರೋಚಕ,ಮೈನವೀರೇಳಿಸುವಂತದ್ದು. ತಮ್ಮ ವೈಯಕ್ತಿಕ ಬದುಕಿನ ಸುಖಗಳನ್ನೆಲ್ಲಾ ತೊರೆದು ದೇಶಕ್ಕಾಗಿ ಮುಡಿಪಾಗಿಡುವ ಬದುಕು ಸೈನಿಕನದ್ದು. ಸೈನ್ಯದಲ್ಲಿ ಜೊತೆಗಿದ್ದವರು ನಮ್ಮ ಕೈಯಲ್ಲೇ,ಎದುರಲ್ಲೇ ಪ್ರಾಣ ತ್ಯಾಗ ಮಾಡಿರುವ ದೃಶ್ಯಗಳು ಇನ್ನೂ ಮಾಸದಂತಿದೆ. ದೇಶ ಸೇವೆಯೇ ಭಗವಂತನ ಸೇವೆಯೆಂದು ಪ್ರಾಮಾಣಿಕವಾಗಿ ಸೇವೆ ಮಾಡಿದ ತೃಪ್ತಿ ನಮಗಿದೆ. ನಮ್ಮ ಉಸಿರಿರುವವರೆಗೆ ಬೇರೆ ಬೇರೆ ರೂಪದಲ್ಲಿ ದೇಶಕ್ಕಾಗಿ ಸೇವೆ ಮಾಡೋ ಅವಕಾಶವಿದ್ದು, ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಮಾಜಿ ಸೈನಿಕ ಕಾಂಚೋಡು ಗೋಪಾಲಕೃಷ್ಣ ಭಟ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಕಾರ್ಗಿಲ್ ವಿಜಯ ದಿವಸ’ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ  ತಾವು ಸೈನಿಕನಾಗಿದ್ದಾಗ ಮೆರೆದ ಸಾಹಸವನ್ನು ಎಳೆ ಎಳೆಯಾಗಿ ಬಿಚ್ಚಿ ವಿದ್ಯಾರ್ಥಿಗಳಿಗೆ ವಿವರಿಸಿದರು.’ಜೈ ಜವಾನ್ ಜೈ ಕಿಸಾನ್ ನನ್ನ ಮೂಲ ಮಂತ್ರವಾಗಿದೆ ನಿವೃತ್ತಿ ಬಳಿಕ  ಕೃಷಿಕನಾಗಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕಾಲೇಜಿನ ದೈಹಿಕ ಶಿಕ್ಷಕ ಹಾಗೂ ಮಾಜಿ ಸೈನಿಕ ಲಕ್ಷ್ಮಣ್ ಜಿ.ಡಿಯವರು ಕಾರ್ಗಿಲ್ ಬಗ್ಗೆ ಪೂರ್ಣ ಮಾಹಿತಿ ನೀಡಿದರು. ಕಾರ್ಗಿಲ್ ಕದನ ಸಮಯ ಅಲ್ಲೇ ಇದ್ದ ತಮ್ಮ ಅನುಭವ ಹಂಚಿಕೊಂಡರು.

ಇನ್ನೊರ್ವ ಅತಿಥಿಯಾಗಿದ್ದ ಕಾಲೇಜಿನ ನಿಲಯ ಪಾಲಕರು ಹಾಗೂ ಮಾಜಿ ಸೈನಿಕರಾದ ವಿಶ್ವನಾಥ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅವರು ಅನ್ನ ಕೊಟ್ಟ ರೈತ ದೇಶಕ್ಕೆ ದುಡಿವ ಯೋಧನನ್ನು ಯಾವತ್ತೂ ಮರೆಯಬಾರದು, ತಮ್ಮ ಮನೋಬಲವನ್ನು ಗೆದ್ದು ಹೋರಾಡುವ ಸೈನಿಕ ಯಾವತ್ತೂ ನಮಗೆ ಮಾದರಿ ಎಂದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಮನೀಷ್ ಕುಮಾರ್ ಉಪಸ್ಥಿತರಿದ್ದರು.

ಕಾಲೇಜು ವತಿಯಿಂದ ವೇದಿಕೆಯಲ್ಲಿದ್ದ ಮಾಜಿ ಸೈನಿಕರನ್ನು  ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ದೇಶಕ್ಕಾಗಿ ಹೋರಾಡಿ ಮಡಿದ ಸೈನಿಕರಿಗೆ ಮೌನ ಪ್ರಾರ್ಥನೆ ಮಾಡಿ ಗೌರವ ಸೂಚಿಸಲಾಯಿತು.

ಸಂಸ್ಕೃತ ಉಪನ್ಯಾಸಕರಾದ ಮಹೇಶ್ಎಸ್.ಎಸ್ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹರ್ಷಿತ್ ವಂದಿಸಿದರು.

Related posts

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya
error: Content is protected !!