25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

ಉಜಿರೆ: ‘ ಯುದ್ದವೆಂದರೆ ರೋಚಕವಾದದ್ದು ಅದರಲ್ಲೂ ಕಾರ್ಗಿಲ್ ಯುದ್ಧ ಹಾಗೂ ವಿಜಯವು ಅತಿರೋಚಕ . ಕಾರ್ಗಿಲ್ ಪ್ರದೇಶವು ಯಾವಾಗಲೂ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶ ಹಾಗೆಯೇ ಹಿಮದಿಂದ ಅನೇಕ ಖಾಯಿಲೆಗಳಿಗೆ ಆಸ್ಪದವಿರುವ ಪ್ರದೇಶವೂ ಆಗಿದೆ. ಇಲ್ಲಿ ಪಾಕಿಸ್ತಾನ ಆಕ್ರಮಣ ಮಾಡಿದಾಗ ನಮ್ಮ ಭಾರತೀಯ ಸೇನೆಯ ಯೋಧರು ಹೋರಾಡಿ ವಿಜಯ ಸಂಪಾದಿಸಿದ್ದು ಅವಿಸ್ಮರಣೀಯ ‘ ಎಂದು ಭಾರತೀಯ ಸೇನೆಯ ಮಾಜಿ ಯೋಧರಾದ ಉಜಿರೆ ಬಡೆಕೊಟ್ಟುವಿನ ವಿಕ್ಟರ್ ಕ್ರಾಸ್ತಾ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಉಜಿರೆಯ ಸಿದ್ದವನದಲ್ಲಿ ನಡೆದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇವರು ವಿದ್ಯಾರ್ಥಿಗಳಿಗೆ ಸೇನೆಗೆ ಸೇರುವ ಬಗ್ಗೆ ಮಾಹಿತಿ ನೀಡಿದರು. ಸೇನೆಯಲ್ಲಿ ಇದ್ದರೂ ಬೆಲೆ ಇದೆ ಸತ್ತರೂ ಬೆಲೆ ಇದೆ ಎಂಬುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಹ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ‘ ಯುವಕರಲ್ಲಿ ದೇಶ ಪ್ರೇಮ ಹೆಚ್ಚಾಗಬೇಕಾದರೆ ಹಾಗೂ ಸೈನಿಕರಿಗೆ ಗೌರವ ಸಲ್ಲಿಸಲು ಕಾರ್ಗಿಲ್ ದಿನದಂತಹ ಕಾರ್ಯಕ್ರಮ ಅಗತ್ಯ ‘ ಎಂದು ನುಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ವಿದ್ಯಾರ್ಥಿ ಬೋರೇಶ್ ಅವರು ಕಾರ್ಗಿಲ್ ವಿಜಯ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸಿದ್ದವನ ಗುರುಕುಲದ ಪಾಲಕರಾದ ಮಾಚಾರು ಕೇಶವ ನಾಯ್ಕ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾ.ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ಸ್ವಾಗತಿಸಿ , ಆದಿತ್ಯ ವಂದಿಸಿದರು. ದಿವಿನ್ ನಿರೂಪಿಸಿದರು.

Related posts

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya
error: Content is protected !!