23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

ಕಕ್ಕಿಂಜೆ: ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಗೆ  ನಾರ್ಥ್ ಕೆರೊಲಿನಾ  ವಿ.ವಿ.ಯ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ಒಟ್ಟು  15 ಜನರ   ತಂಡವು  ಮಂಗಳೂರಿನ ದೇರಳಕಟ್ಟೆ ಯೇನೆಪೊಯ ದಂತವೈದ್ಯಕೀಯ ಕಾಲೇಜು  ಇವರ ಸಹಕಾರದೊಂದಿಗೆ ಜು 25  ರಂದು  ಭೇಟಿ ನೀಡಿ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ  “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ಚರ್ಚಿಸಿ  ಗ್ರಾಮಾಂತರ ಆರೋಗ್ಯ ಸೇವೆಯ ಬಗೆಗೆ ಮಾಹಿತಿ ಪಡೆದರು.

ಶ್ರೀ ಕೃಷ್ಣ  ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಸವಿವರ ಮಾಹಿತಿ ನೀಡಿದರು. ವಿದ್ಯಾರ್ಥಿ ತಂಡ ಸುಮಾರು 3 ಗಂಟೆಗಳ ಕಾಲ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ  ಸೇವೆಯ ಪರಿಪೂರ್ಣ ಅನುಭವ ಪಡೆದು ಸಂತೃಪ್ತಿಗೊಂಡರು . 

ಈ ಸಂದರ್ಭದಲ್ಲಿ  ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ.ವಂದನಾ ಎಂ ಇರ್ವತ್ರಾಯ, ವೈದ್ಯಾಧಿಕಾರಿಗಳಾದ ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ,ದಂತ  ವೈದ್ಯಾಧಿಕಾರಿ ಡಾ.ಪ್ರಕೃತಿ ಶೆಟ್ಟಿ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಪ್ರಮಾದ ಪ್ರಭಾಕರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವೈದ್ಯಕೀಯ ವಿದ್ಯಾರ್ಥಿಗಳ ತಂಡ ಶ್ರೀ ಕೃಷ್ಣ ಆಸ್ಪತ್ರೆಯ ಸೇವೆಯ ಬಗೆಗೆ ಮೆಚ್ಚುಗೆ  ವ್ಯಕ್ತಪಡಿಸಿ, ವೈದ್ಯರು ಹಾಗು ಸಿಬ್ಬಂದಿಗಳನ್ನು ಅಭಿನಂದಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!