23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿಯಾಗಿದೆ. ಈ ರಸ್ತೆಯು 28 ಪರಿಶಿಷ್ಟ  ಪಂಗಡದ ಮನೆ  ಸೇರಿದಂತೆ ಸುಮಾರು 50 ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು. ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ,ಹೇಮಚಂದ್ರ, ,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

Related posts

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya
error: Content is protected !!