September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿಯಾಗಿದೆ. ಈ ರಸ್ತೆಯು 28 ಪರಿಶಿಷ್ಟ  ಪಂಗಡದ ಮನೆ  ಸೇರಿದಂತೆ ಸುಮಾರು 50 ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು. ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ,ಹೇಮಚಂದ್ರ, ,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಕಾಯರ್ತಡ್ಕ ಪ್ರೌಢ ಶಾಲೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya
error: Content is protected !!