22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

ಕಕ್ಕಿಂಜೆ: ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಗೆ  ನಾರ್ಥ್ ಕೆರೊಲಿನಾ  ವಿ.ವಿ.ಯ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ಒಟ್ಟು  15 ಜನರ   ತಂಡವು  ಮಂಗಳೂರಿನ ದೇರಳಕಟ್ಟೆ ಯೇನೆಪೊಯ ದಂತವೈದ್ಯಕೀಯ ಕಾಲೇಜು  ಇವರ ಸಹಕಾರದೊಂದಿಗೆ ಜು 25  ರಂದು  ಭೇಟಿ ನೀಡಿ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ  “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ಚರ್ಚಿಸಿ  ಗ್ರಾಮಾಂತರ ಆರೋಗ್ಯ ಸೇವೆಯ ಬಗೆಗೆ ಮಾಹಿತಿ ಪಡೆದರು.

ಶ್ರೀ ಕೃಷ್ಣ  ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಸವಿವರ ಮಾಹಿತಿ ನೀಡಿದರು. ವಿದ್ಯಾರ್ಥಿ ತಂಡ ಸುಮಾರು 3 ಗಂಟೆಗಳ ಕಾಲ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ  ಸೇವೆಯ ಪರಿಪೂರ್ಣ ಅನುಭವ ಪಡೆದು ಸಂತೃಪ್ತಿಗೊಂಡರು . 

ಈ ಸಂದರ್ಭದಲ್ಲಿ  ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ.ವಂದನಾ ಎಂ ಇರ್ವತ್ರಾಯ, ವೈದ್ಯಾಧಿಕಾರಿಗಳಾದ ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ,ದಂತ  ವೈದ್ಯಾಧಿಕಾರಿ ಡಾ.ಪ್ರಕೃತಿ ಶೆಟ್ಟಿ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಪ್ರಮಾದ ಪ್ರಭಾಕರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವೈದ್ಯಕೀಯ ವಿದ್ಯಾರ್ಥಿಗಳ ತಂಡ ಶ್ರೀ ಕೃಷ್ಣ ಆಸ್ಪತ್ರೆಯ ಸೇವೆಯ ಬಗೆಗೆ ಮೆಚ್ಚುಗೆ  ವ್ಯಕ್ತಪಡಿಸಿ, ವೈದ್ಯರು ಹಾಗು ಸಿಬ್ಬಂದಿಗಳನ್ನು ಅಭಿನಂದಿಸಿದರು.

Related posts

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!