September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

ಕಕ್ಕಿಂಜೆ: ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಗೆ  ನಾರ್ಥ್ ಕೆರೊಲಿನಾ  ವಿ.ವಿ.ಯ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ಒಟ್ಟು  15 ಜನರ   ತಂಡವು  ಮಂಗಳೂರಿನ ದೇರಳಕಟ್ಟೆ ಯೇನೆಪೊಯ ದಂತವೈದ್ಯಕೀಯ ಕಾಲೇಜು  ಇವರ ಸಹಕಾರದೊಂದಿಗೆ ಜು 25  ರಂದು  ಭೇಟಿ ನೀಡಿ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ  “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ಚರ್ಚಿಸಿ  ಗ್ರಾಮಾಂತರ ಆರೋಗ್ಯ ಸೇವೆಯ ಬಗೆಗೆ ಮಾಹಿತಿ ಪಡೆದರು.

ಶ್ರೀ ಕೃಷ್ಣ  ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಸವಿವರ ಮಾಹಿತಿ ನೀಡಿದರು. ವಿದ್ಯಾರ್ಥಿ ತಂಡ ಸುಮಾರು 3 ಗಂಟೆಗಳ ಕಾಲ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ  ಸೇವೆಯ ಪರಿಪೂರ್ಣ ಅನುಭವ ಪಡೆದು ಸಂತೃಪ್ತಿಗೊಂಡರು . 

ಈ ಸಂದರ್ಭದಲ್ಲಿ  ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ.ವಂದನಾ ಎಂ ಇರ್ವತ್ರಾಯ, ವೈದ್ಯಾಧಿಕಾರಿಗಳಾದ ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ,ದಂತ  ವೈದ್ಯಾಧಿಕಾರಿ ಡಾ.ಪ್ರಕೃತಿ ಶೆಟ್ಟಿ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಪ್ರಮಾದ ಪ್ರಭಾಕರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವೈದ್ಯಕೀಯ ವಿದ್ಯಾರ್ಥಿಗಳ ತಂಡ ಶ್ರೀ ಕೃಷ್ಣ ಆಸ್ಪತ್ರೆಯ ಸೇವೆಯ ಬಗೆಗೆ ಮೆಚ್ಚುಗೆ  ವ್ಯಕ್ತಪಡಿಸಿ, ವೈದ್ಯರು ಹಾಗು ಸಿಬ್ಬಂದಿಗಳನ್ನು ಅಭಿನಂದಿಸಿದರು.

Related posts

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಜೇಸಿ ಹೇಮಾವತಿ ಕೆ ಮುಂಡಾಜೆ ರವರಿಗೆ ಸಾಧನಾಶ್ರೀ ಪುರಸ್ಕಾರ

Suddi Udaya
error: Content is protected !!