24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಬಿದ್ದಿದೆ.

ರಸ್ತೆಗೆ ಭೂ ಸ್ವಾಧೀನವಾಗಲಿರುವ ಜಾಗದ ಭೂಮಾಲಕರು ಅಥವಾ ಯಾವುದೇ ರೀತಿಯ ಹಿತಾಸಕ್ತಿ ಉಳ್ಳವರು 21 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಭೂಸ್ವಾಧೀನ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕುಕ್ಕುಳ ಗ್ರಾಮದಲ್ಲಿ ಒಟ್ಟು 35 ಸರ್ವೆ ನಂಬ್ರಗಳು, ಪಾರೆಂಕಿ ಗ್ರಾಮದಲ್ಲಿ ಒಟ್ಟು 20 ಸರ್ವೆನಂಬ್ರಗಳು, ಮಾಲಾಡಿ ಗ್ರಾಮದಲ್ಲಿ ಒಟ್ಟು 35 ಸರ್ವೆನಂಬ್ರಗಳು, ಸೋಣಂದೂರು ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಕುವೆಟ್ಟು ಗ್ರಾಮದಲ್ಲಿ ಒಟ್ಟು 78 ಸರ್ವೆ ನಂಬ್ರಗಳು, ಬೆಳ್ತಂಗಡಿ ಕಸಬಾದಲ್ಲಿ ಒಟ್ಟು 144 ಸರ್ವೆನಂಬ್ರಗಳು, ಲಾಯಿಲ ಗ್ರಾಮದಲ್ಲಿ ಒಟ್ಟು 93 ಸರ್ವೆ ನಂಬ್ರಗಳು, ಉಜಿರೆ ಗ್ರಾಮದಲ್ಲಿ ಒಟ್ಟು 68 ಸರ್ವೆನಂಬ್ರಗಳು, ಕಲ್ಮಂಜ ಗ್ರಾಮದಲ್ಲಿ ಒಟ್ಟು20 ಸರ್ವೆ ನಂಬ್ರಗಳು, ಮುಂಡಾಜೆ ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಚಿಬಿದ್ರೆ ಗ್ರಾಮದಲ್ಲಿ ಒಟ್ಟು 41 ಸರ್ವೆ ನಂಬ್ರಗಳು, ಚಾರ್ಮಾಡಿಯಲ್ಲಿ ಒಟ್ಟು 88 ಸರ್ವೆ ನಂಬ್ರಗಳು ಈ ಸರ್ವೆ ನಂಬ್ರಗಳಲ್ಲಿ ರಸ್ತೆ ಹಾದು ಹೋಗುತ್ತಿದ್ದು, ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ. ಇದಕ್ಕಾಗಿ ಭೂ ಸ್ವಾಧೀನ ನಡೆಯಲಿದೆ.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!