22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ.

ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕವೇ ಸಂಚಾರ ಮಾಡುತ್ತಿದ್ದರು. ಇದೀಗ ಸೇತುವೆ ಕುಸಿದಿರುವುದರಿಂದ ತೊಂದರೆಯಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ ಕಾಲ್ನಡಿಗೆಯಲ್ಲೇ ಸಾಗಬೇಕಾದ ಅನಿವಾರ್ಯ ನಿರ್ಮಾಣವಾಗಿದೆ.

ಅರಣ್ಯವಾಸಿಗಳಿಗೆ ಸಂಚಾರಿ ವಾಹನದ ಮೂಲಕ ಅಳಂಬ ಪ್ರದೇಶಕ್ಕೆ ಪಡಿತರ ವಿತರಣೆಯಾಗುತ್ತಿತ್ತು. ಈ ಸೇತುವೆ ಕುಸಿತವಾಗಿರುವುದರಿಂದ ಇನ್ನು ಪಡಿತರ ಸೇರಿದಂತೆ ಇನ್ನಿತರ ವಸ್ತುಗಳನ್ನೂ ಕಾಲ್ನಡಿಗೆಯಲ್ಲೇ ಹೊತ್ತೊಯ್ಯುವ ಅನಿವಾರ್ಯ ಬರಲಿದೆ. ತುರ್ತು ಸಂದರ್ಭಗಳಲ್ಲೂ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.

ಮೂರು ವರ್ಷದ ಹಿಂದೆ ಕುಕ್ಕುಜೆ ಸಮೀಪದ ಸೇತುವೆ ಇದೇ ರೀತಿ ಕುಸಿತವಾಗಿತ್ತು. ನಂತರ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಅದೇ ಸಂದರ್ಭದಲ್ಲಿ ಕಾಡಬಾಗಿಲು ಸೇತುವೆಯನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆದರೂ ಹೊಸ ಸೇತುವೆ ನಿರ್ಮಾಣಕ್ಕೆ ಮುಂದಾಗಿರಲಿಲ್ಲ. ಇದೀಗ ಸೇತುವೆ ಕುಸಿತ ಆಗಿರುವುದರಿಂದ ಸಂಪರ್ಕವೇ ಸಾಧ್ಯವಿಲ್ಲದಂತಾಗಿದೆ.

ಕಾಡಬಾಗಿಲು ಸೇತುವೆಯನ್ನು ತಕ್ಷಣವೇ ನಿರ್ಮಾಣ ಮಾಡಬೇಕು. ಅರಣ್ಯವಾಸಿಗಳಿಗೆ ಸಂಚರಿಸಲು ತೊಂದರೆಯಾಗದಂತೆ ಕ್ರಮ ವಹಿಸಲು ಆಡಳಿತ ವ್ಯವಸ್ಥೆ ಮುಂದಾಗಬೇಕು ಎಂದು ಸ್ಥಳೀಯ ನಿವಾಸಿ ಚೀಂಕ್ರ ಮಲೆಕುಡಿಯ ಬರೆಂಗಾಡಿ ಒತ್ತಾಯಿಸಿದರು.

Related posts

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!