24 C
ಪುತ್ತೂರು, ಬೆಳ್ತಂಗಡಿ
June 8, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ.

ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕವೇ ಸಂಚಾರ ಮಾಡುತ್ತಿದ್ದರು. ಇದೀಗ ಸೇತುವೆ ಕುಸಿದಿರುವುದರಿಂದ ತೊಂದರೆಯಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ ಕಾಲ್ನಡಿಗೆಯಲ್ಲೇ ಸಾಗಬೇಕಾದ ಅನಿವಾರ್ಯ ನಿರ್ಮಾಣವಾಗಿದೆ.

ಅರಣ್ಯವಾಸಿಗಳಿಗೆ ಸಂಚಾರಿ ವಾಹನದ ಮೂಲಕ ಅಳಂಬ ಪ್ರದೇಶಕ್ಕೆ ಪಡಿತರ ವಿತರಣೆಯಾಗುತ್ತಿತ್ತು. ಈ ಸೇತುವೆ ಕುಸಿತವಾಗಿರುವುದರಿಂದ ಇನ್ನು ಪಡಿತರ ಸೇರಿದಂತೆ ಇನ್ನಿತರ ವಸ್ತುಗಳನ್ನೂ ಕಾಲ್ನಡಿಗೆಯಲ್ಲೇ ಹೊತ್ತೊಯ್ಯುವ ಅನಿವಾರ್ಯ ಬರಲಿದೆ. ತುರ್ತು ಸಂದರ್ಭಗಳಲ್ಲೂ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.

ಮೂರು ವರ್ಷದ ಹಿಂದೆ ಕುಕ್ಕುಜೆ ಸಮೀಪದ ಸೇತುವೆ ಇದೇ ರೀತಿ ಕುಸಿತವಾಗಿತ್ತು. ನಂತರ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಅದೇ ಸಂದರ್ಭದಲ್ಲಿ ಕಾಡಬಾಗಿಲು ಸೇತುವೆಯನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆದರೂ ಹೊಸ ಸೇತುವೆ ನಿರ್ಮಾಣಕ್ಕೆ ಮುಂದಾಗಿರಲಿಲ್ಲ. ಇದೀಗ ಸೇತುವೆ ಕುಸಿತ ಆಗಿರುವುದರಿಂದ ಸಂಪರ್ಕವೇ ಸಾಧ್ಯವಿಲ್ಲದಂತಾಗಿದೆ.

ಕಾಡಬಾಗಿಲು ಸೇತುವೆಯನ್ನು ತಕ್ಷಣವೇ ನಿರ್ಮಾಣ ಮಾಡಬೇಕು. ಅರಣ್ಯವಾಸಿಗಳಿಗೆ ಸಂಚರಿಸಲು ತೊಂದರೆಯಾಗದಂತೆ ಕ್ರಮ ವಹಿಸಲು ಆಡಳಿತ ವ್ಯವಸ್ಥೆ ಮುಂದಾಗಬೇಕು ಎಂದು ಸ್ಥಳೀಯ ನಿವಾಸಿ ಚೀಂಕ್ರ ಮಲೆಕುಡಿಯ ಬರೆಂಗಾಡಿ ಒತ್ತಾಯಿಸಿದರು.

Related posts

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!